ನವದೆಹಲಿ: ರಾಷ್ಟ್ರ ಧ್ವಜವು ದೇಶದ ಗೌರವ ಮತ್ತು ಕೀರ್ತಿ. ಹೀಗಾಗಿ ಶನಿವಾರದಿಂದ ಆರಂಭವಾಗುವ ‘ಹರ್ ಘರ್ ತಿರಂಗಾ’ ಅಭಿಯಾನದ ಅಡಿಯಲ್ಲಿ ದೆಹಲಿಯ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿಕೊಂಡಿದ್ದಾರೆ.
ಕೇಜ್ರಿವಾಲ್ ಸರ್ಕಾರವು 25 ಲಕ್ಷ ತ್ರಿವರ್ಣ ಧ್ವಜಗಳನ್ನು ಶಾಲಾ ಮಕ್ಕಳಿಗೆ ಮತ್ತು ರಾಜಧಾನಿಯ ಮೂಲೆ ಮೂಲೆಗಳಲ್ಲಿ ವಿತರಿಸಲು ಯೋಜಿಸಿದೆ. ಅಲ್ಲದೆ, ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸಲು ವಿವಿಧ ದೇಶಭಕ್ತಿಯ ಕಾರ್ಯಕ್ರಮಗಳನ್ನು ಕೂಡ ಆಯೋಜಿಸುತ್ತಿದೆ.
तिरंगा हमारी आन है, तिरंगा हमारी बान है, तिरंगा हमारी शान है, तिरंगा हमारी जान है
आज से हर घर तिरंगा अभियान शुरू हो रहा है। आप भी गर्व से अपने घर पर तिरंगा ज़रूर लगायें।
— Arvind Kejriwal (@ArvindKejriwal) August 13, 2022
‘ತ್ರಿವರ್ಣ ಧ್ವಜ ನಮ್ಮ ಹೆಮ್ಮೆ, ಗೌರವ, ಕೀರ್ತಿ ಮತ್ತು ಜೀವನ. ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ ಆರಂಭವಾಗಿದೆ. ನಿಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹಾರಿಸಿ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.