News Karnataka Kannada
Sunday, April 28 2024
ದೆಹಲಿ

ನವದೆಹಲಿ: ಪರೀಕ್ಷೆಯ ಒತ್ತಡದಿಂದ 12ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ನೈಋತ್ಯ ದೆಹಲಿಯ ದ್ವಾರಕಾದಲ್ಲಿ ನಡೆದಿದೆ.
Photo Credit : Pixabay

ನವದೆಹಲಿ: ಪರೀಕ್ಷೆಯ ಒತ್ತಡದಿಂದಾಗಿ 12ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೈಋತ್ಯ ದೆಹಲಿಯಲ್ಲಿ ನಡೆದಿದೆ.

ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ವಿಷ್ಣು ಎಂಬ 18 ವರ್ಷದ ಬಾಲಕನ ಆತ್ಮಹತ್ಯೆಯ ಬಗ್ಗೆ ಸಫ್ದರ್ಜಂಗ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ಬಂದಿದ್ದು, ನಂತರ ಪೊಲೀಸ್ ತಂಡವನ್ನು ಸ್ಥಳಕ್ಕೆ ರವಾನಿಸಲಾಗಿದೆ.

ಆತ 12ನೇ ತರಗತಿ ವಿದ್ಯಾರ್ಥಿಯಾಗಿದ್ದ. ಅವರ ತಾಯಿ ಸ್ಟಾಫ್ ನರ್ಸ್. ಪರೀಕ್ಷೆಯ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 15 ರಿಂದ ಪ್ರಾರಂಭವಾಗಿವೆ.

10 ನೇ ತರಗತಿ ಪರೀಕ್ಷೆಗಳು ಮಾರ್ಚ್ 21 ರಂದು ಕೊನೆಗೊಳ್ಳಲಿದ್ದು, 12 ನೇ ತರಗತಿ ಪರೀಕ್ಷೆಗಳು ಏಪ್ರಿಲ್ 5 ರಂದು ಕೊನೆಗೊಳ್ಳುತ್ತವೆ. ಎರಡೂ ತರಗತಿಗಳ ಪರೀಕ್ಷೆಗಳು ಬೆಳಿಗ್ಗೆ 10.30 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 1.30 ಕ್ಕೆ ಕೊನೆಗೊಳ್ಳುತ್ತವೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು