ನವದೆಹಲಿ, ಸೆಪ್ಟೆಂಬರ್ 23: ರಾಷ್ಟ್ರ ರಾಜಧಾನಿಯ ನರೇಲಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರ ದೆಹಲಿಯ ಎಂಎಸ್ಸಿ ಮಾಲ್ ಬಳಿಯ ನರೇಲಾ ಕೈಗಾರಿಕಾ ಪ್ರದೇಶದ ಸಿ 358 ರ ಸದರಿ ಕಾರ್ಖಾನೆಯಲ್ಲಿ ಬೆಳಿಗ್ಗೆ 8.37 ಕ್ಕೆ ಬೆಂಕಿ ಅವಘಡದ ಬಗ್ಗೆ ತಮಗೆ ಕರೆ ಬಂದಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.
ಘಟನೆಯಲ್ಲಿ ಯಾವುದೇ ಗಾಯ ಅಥವಾ ಸಾವುನೋವಿನ ಬಗ್ಗೆ ಯಾವುದೇ ವಿವರಗಳನ್ನು ನೀಡಲು ಅಧಿಕಾರಿಗೆ ಸಾಧ್ಯವಾಗಲಿಲ್ಲ.
ಇತ್ತೀಚಿನ ವರದಿಗಳ ಪ್ರಕಾರ, ಪ್ರಸ್ತುತ ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ.