News Karnataka Kannada
Sunday, May 05 2024
ದೆಹಲಿ

ನವದೆಹಲಿ: ಕಟ್ಟಡದ ಟೆರೇಸ್ ನಿಂದ ಮಹಿಳೆಯನ್ನು ತಳ್ಳಿ ಹತ್ಯೆಗೆ ಯತ್ನ

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ  ಅನ್ನೋ ಕಾರಣಕ್ಕೆ ಲಿವ್ ಇನ್ ಪಾರ್ಟನರ್ ಆಗಿದ್ದ ಮಹಿಳೆಯನ್ನ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಹರಿಯಾಣದಲ್ಲಿ ನಡೆದಿದೆ.
Photo Credit :

ನವದೆಹಲಿ: ದೆಹಲಿಯ ತನ್ನ ಕಟ್ಟಡದ ಟೆರೇಸ್ ನಿಂದ 30 ವರ್ಷದ ಮಹಿಳೆಯನ್ನು ಆಕೆಯ ಅತ್ತೆ-ಮಾವ ತಳ್ಳಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ನಗರದ ಮಯೂರ್ ವಿಹಾರ್ ಪ್ರದೇಶದಲ್ಲಿ ಮುಂಜಾನೆ  ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆಯ ಸಹೋದರ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರೊಂದಿಗೆ ಹಂಚಿಕೊಂಡ ವೀಡಿಯೊದಲ್ಲಿ, ಮಹಿಳೆ ಟೆರೇಸ್ ಮೇಲೆ ನಿಂತಿದ್ದಾಗ ತನ್ನನ್ನು ತಳ್ಳಲಾಯಿತು ಎಂದು ಹೇಳಿದ್ದಾರೆ.

ಮಹಿಳೆ ಬೀದಿ ಬದಿಯಲ್ಲಿ ಬಿದ್ದಿದ್ದರು. ಇದಾದ ಸ್ವಲ್ಪ ಸಮಯದ ನಂತರ, ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ..

ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವಂತೆ ಮತ್ತು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ದೆಹಲಿ ಪೊಲೀಸರಿಗೆ ನೋಟಿಸ್ ನೀಡುವುದಾಗಿ ಮಲಿವಾಲ್ ಹೇಳಿದರು.

ಸಂತ್ರಸ್ತೆಯ ಹೇಳಿಕೆ, ಮೆಡಿಕೋ-ಲೀಗಲ್ ಕೇಸ್ (ಎಂ ಎಲ್ ಸಿ) ಮತ್ತು ಇಲ್ಲಿಯವರೆಗೆ ಈ ವಿಷಯದಲ್ಲಿ ನಡೆಸಲಾದ ವಿಚಾರಣೆಗಳ ಆಧಾರದ ಮೇಲೆ, ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಯತ್ನ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಪೂರ್ವ ಜಿಲ್ಲೆ) ಪ್ರಿಯಾಂಕಾ ಕಶ್ಯಪ್ ತಿಳಿಸಿದ್ದಾರೆ. ಪ್ರಸ್ತುತ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು