ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿದ್ದು, ಈ ವೇಳೆ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆಸ್ತಿಗಳನ್ನು ತನ್ನ ಉದ್ಯಮ ಮಿತ್ರರಿಗೆ ನೀಡುವ ಮೂಲಕ ದೇಶ ವಿರೋಧಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ಮೋದಿ ಸರ್ಕಾರದ ರಾಷ್ಟ್ರೀಯ ಆಸ್ತಿಗಳು ಮತ್ತು ಪಿಎಸ್ಯುಗಳನ್ನು ತನ್ನ ಉದ್ಯಮಿ ಮಿತ್ರರಿಗೆ ನೀಡುತ್ತಿದೆ. ಇದರಿಂದಾಗಿ ಭಾರತದ ಬಡವರು, ಎಸ್ಸಿಗಳು, ಒಬಿಸಿಗಳು ಮೀಸಲಾತಿ ಆಧಾರದಲ್ಲಿ ದೊರೆಯುತ್ತಿದ್ದ ಉದ್ಯೋಗ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದರು. ಮೇ 26 ರಂದು ಕಾಂಗ್ರೆಸ್ ಬಿಜೆಪಿ ಸರ್ಕಾರವು ಜನರಿಗೆ ನೀಡಿದ ಭರವಸೆ ಮತ್ತು ಅದರ ವೈಫಲ್ಯಗಳ ಕುರಿತು ಕಿರುಪುಸ್ತಕವನ್ನು ಬಿಡುಗಡೆ ಮಾಡಿತ್ತು.