ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.
ಲಂಡನ್ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಉಭಯ ಸದನಗಳನ್ನು ಮುಂದೂಡಿದ ಕೂಡಲೇ ಸಂಸತ್ತಿನ ಹೊರಗಿನ ವಿಜಯ್ ಚೌಕ್ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, “ಮೋದಿ ನೇತೃತ್ವದಲ್ಲಿ ದೇಶದಲ್ಲಿ ಕಾನೂನು ಮತ್ತು ಪ್ರಜಾಪ್ರಭುತ್ವಕ್ಕೆ ಬೆಲೆಯಿಲ್ಲ. ಮೋದಿ ಸರ್ವಾಧಿಕಾರಿ ರೀತಿ ಅಧಿಕಾರ ನಡೆಸುತ್ತಿದ್ದಾರೆ. ಆದರೆ ಇದೇ ವೇಳೆ ಅವರು ಪ್ರಜಾಪ್ರಭುತ್ವದ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾರೆ ಎಂದು ಕಿಡಿಕಾರಿದರು. ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತು ನಾಶ ಮಾಡುವವರು ಅದನ್ನು ಉಳಿಸುವ
ಮಾತನಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಅದಾನಿ ವಿಷಯದ ಕುರಿತು ಖರ್ಗೆ ಅವರು, “ನಾವು ಅದಾನಿ ಷೇರುಗಳ ವಿಚಾರದಲ್ಲಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆಗೆ ಒತ್ತಾಯಿಸುತ್ತೇವೆ, ನಾವು ಈ ವಿಷಯವನ್ನು ಪ್ರಸ್ತಾಪಿಸಿದಾಗ, ಮೈಕ್ಗಳು ಸ್ವಿಚ್ ಆಫ್ ಆಗುತ್ತವೆ ಮತ್ತು ಸದನದಲ್ಲಿ ಗದ್ದಲ ಉಂಟಾಯಿತು. ಆದಾಗ್ಯೂ, ಪ್ರತಿಪಕ್ಷಗಳು ಒಟ್ಟಾಗಿವೆ ಮತ್ತು ಅದಾನಿ ವಿಷಯದ ಬಗ್ಗೆ ಜೆಪಿಸಿ ಬೇಡಿಕೆಯನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು