ನವದೆಹಲಿ, ಸೆಪ್ಟೆಂಬರ್ 25: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ಸಂಜೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದು, 2024 ರ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.
೨೦೨೪ ರಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ತೆಗೆದುಕೊಂಡ ಉಪಕ್ರಮಗಳ ಬಗ್ಗೆ ಇಬ್ಬರೂ ನಾಯಕರು ಕಾಂಗ್ರೆಸ್ ಮುಖ್ಯಸ್ಥರಿಗೆ ವಿವರಿಸಲಿದ್ದಾರೆ.
ನಿತೀಶ್ ತಮ್ಮ ಕಳೆದ ದೆಹಲಿ ಪ್ರವಾಸದಲ್ಲಿ ರಾಹುಲ್ ಗಾಂಧಿ, ಶರದ್ ಪವಾರ್, ಅರವಿಂದ್ ಕೇಜ್ರಿವಾಲ್ ಮತ್ತು ಸೀತಾರಾಂ ಯೆಚೂರಿ ಅವರನ್ನು ಭೇಟಿ ಮಾಡಿದ್ದರು.
ಹರ್ಯಾಣದಲ್ಲಿ ಮಾಜಿ ಉಪಪ್ರಧಾನಿ ದೇವಿಲಾಲ್ ಅವರಿಗೆ ಗೌರವ ಸಲ್ಲಿಸಲು ವಿರೋಧ ಪಕ್ಷದ ನಾಯಕರು ಒಗ್ಗೂಡುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ.
2024 ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದಿಂದ ಬಿಜೆಪಿಯನ್ನು ಅಳಿಸಿಹಾಕಲಾಗುವುದು ಎಂದು ಆರ್ಜೆಡಿ ರಾಷ್ಟ್ರೀಯ ಅಧ್ಯಕ್ಷ ಲಾಲು ಪ್ರಸಾದ್ ಶನಿವಾರ ಹೇಳಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಲಾಲು ಪ್ರಸಾದ್ ಯಾದವ್ ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿಯಲ್ಲಿದ್ದು, ಕಳೆದ ತಿಂಗಳು ಪಾಟ್ನಾಗೆ ಮರಳಿದ್ದರು. ಅವರು ಸೋಮವಾರ ಮೂತ್ರಪಿಂಡ ಕಸಿಗಾಗಿ ಸಿಂಗಾಪುರಕ್ಕೆ ಹೋಗಲಿದ್ದಾರೆ.