ನವದೆಹಲಿ: ದಕ್ಷಿಣ ದೆಹಲಿಯಲ್ಲಿ ವೇಗವಾಗಿ ಬಂದ ಕಾರೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸಾವನ್ನಪ್ಪಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಮೃತನನ್ನು ಮೇಘ್ ಸಿಂಗ್ ಎಂದು ಗುರುತಿಸಲಾಗಿದ್ದು, ಬೆರ್ ಸರಾಯ್ ನಿವಾಸಿಯಾಗಿದ್ದಾನೆ.
ಕತ್ವಾರಿಯಾ ಸರೈ ನಿವಾಸಿಗಳಾದ ರತನ್ ಲಾಲ್ ಗುರು ಮತ್ತು ಅವರ ಪತ್ನಿಯನ್ನು ಏಮ್ಸ್ ಗೆ ದಾಖಲಿಸಲಾಗಿದೆ.
ವೇಗವಾಗಿ ಚಲಿಸುತ್ತಿದ್ದ ಕಾರಿನ ಚಾಲಕನನ್ನು ಜಾಮಿಯಾದ ಗಫಾರ್ ಮಂಜಿಲ್ ನಿವಾಸಿ ಲಿಯಾಸ್ ಅಲಿ ಖಾನ್ ಎಂದು ಗುರುತಿಸಲಾಗಿದ್ದು, ಬಿಳಿ ಬಣ್ಣದ ಫೋರ್ಡ್ ಎಂಡೀವರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐಜಿಐ ವಿಮಾನ ನಿಲ್ದಾಣದಲ್ಲಿ ತನ್ನ ಮಾಲೀಕರನ್ನು ಬಿಟ್ಟು ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.