News Karnataka Kannada
Monday, April 29 2024
ದೆಹಲಿ

ದೆಹಲಿ: ಎಲ್.ಕೆ ಅಡ್ವಾಣಿಯವರನ್ನು ಭೇಟಿ ಮಾಡಿದ ಪೇಜಾವರ ಶ್ರೀಗಳು

New Delhi: Pejawar shri meet LK Advani
Photo Credit : News Kannada

ದೆಹಲಿ: ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು.

ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು.

ಶ್ತೀ ವಿಶ್ವೇಶತೀರ್ಥ ಶ್ರೀಪಾದರು ತಮಗೆ ಯಾವತ್ತೂ ನೀಡಿದ ಸ್ಫೂರ್ತಿಯನ್ನು ಮನಸಾರೆ ಸ್ಮರಿಸಿದರು. ಅಡ್ವಾಣಿಯವರಿಗೆ ಶ್ರೀ ಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು. ಅಡ್ವಾಣಿಯವರ ಪುತ್ರಿ ಪ್ರತಿಭಾ ಅಡ್ವಾಣಿ ಮತ್ತು ಮನೆ ಮಂದಿ ಶ್ರೀಗಳವರನ್ನು ಬರಮಾಡಿಕೊಂಡರು. ಸ್ವಲ್ಪ ಅನಾರೋಗ್ಯವಿದ್ದರೂ ಅಡ್ವಾಣಿಜೀ ಮನೆ ಬಾಗಿಲಿನವರೆಗೆ ಬಂದು ಶ್ರೀಗಳವರನ್ನು ಬೀಳ್ಕೊಟ್ಟರು. ವಿದ್ವಾನ್ ದೇವಿಪ್ರಸಾದ್ ಭಟ್ವ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು