ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ಭಾರತದಲ್ಲಿ ಈಗಲೂ ಕೂಡ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಮಾತಿನ ಕುರಿತು ಹೇಳಿಕೆ ಪಡೆಯಲು ದೆಹಲಿ ಪೊಲೀಸರ ಹಿರಿಯ ಅಧಿಕಾರಿಗಳ ತಂಡ ತುಘಲಕ್ ಲೇನ್ ಪ್ರದೇಶದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿವಾಸಕ್ಕೆ ಆಗಮಿಸಿದೆ.
ಹಿರಿಯ ಅಧಿಕಾರಿಗಳ ಭೇಟಿ ಹಿನ್ನೆಲೆಯಲ್ಲಿ ಮನೆಯ ಹೊರಗೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಆಯುಕ್ತ ಡಾ ಸಾಗರ್ ಪ್ರೀತ್ ಹೂಡಾ, ಜನವರಿ 30 ರಂದು ಶ್ರೀನಗರದಲ್ಲಿ ಗಾಂಧಿ ಹೇಳಿಕೆ ನೀಡಿದ್ದಾರೆ ಎಂದು ವಿವರಿಸಿದರು. ಮಾ.15ರಂದು ಗಾಂಧಿ ಅವರಿಗೆ ಕೊನೆ ಬಾರಿಗೆ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸಿದ್ದು, ಮಾರ್ಚ್ 16 ರಂದು ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿ ಹೇಳಿದರು.
“ಇದು ತುಂಬಾ ಗಂಭೀರವಾದ ವಿಷಯವಾಗಿದೆ ಮತ್ತು ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ನಾವು ಇಲ್ಲಿಗೆ ಬಂದಿದ್ದೇವೆ. ಅವರ ಭಾಷಣ ಮತ್ತು ಸಂತ್ರಸ್ತರ ಬಗ್ಗೆ ನಮಗೆ ಮಾಹಿತಿ ಬೇಕು. ಮಾಹಿತಿ ದೊರೆತಲ್ಲಿ ಈ ವಿಷಯದ ಬಗ್ಗೆ ಕಾನೂನು ಕ್ರಮವನ್ನು ಪ್ರಾರಂಭಿಸಬಹುದು ಮತ್ತು ಸಂತ್ರಸ್ತರಿಗೆ ನ್ಯಾಯ ಒದಗಿಸಲು ಇದು ಅನಿವಾರ್ಯ ಎಂದು ಹೂಡ ತಿಳಿಸಿದರು.
ಭಾನುವಾರ ಗಾಂಧಿಯನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ, ಆದರೆ ಅವರ ಸಿಬ್ಬಂದಿಗೆ ವಿಷಯದ ಬಗ್ಗೆ ತಿಳಿಸಲಾಯಿತು ಎಂದು ಅಧಿಕಾರಿ ಹೇಳಿದರು. ಸಂತ್ರಸ್ತರು ದೆಹಲಿಯವರಾಗಿದ್ದರೆ, ನಾವು ಎಫ್ಐಆರ್ ದಾಖಲಿಸುತ್ತೇವೆ, ಅವರು ಇತರ ರಾಜ್ಯಗಳಾಗಿದ್ದರೆ ನಾವು ಅವರಿಗೆ ತಿಳಿಸುತ್ತೇವೆ ಎಂದು ಹೂಡಾ ಹೇಳಿದರು