ನವದೆಹಲಿ, ಆ.6: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕುಸ್ತಿಪಟುಗಳಾದ ದೀಪಕ್ ಪೂನಿಯಾ, ದಿವ್ಯಾ ಕಕ್ರಾನ್ ಮತ್ತು ಮೋಹಿತ್ ಗ್ರೆವಾಲ್ ಪದಕ ಗೆದ್ದಿರುವುದಕ್ಕೆ ರಾಷ್ಟ್ರ ಪತಿ ದ್ರೌಪದಿ ಮುರ್ಮು ಶ್ಲಾಘಿಸಿದ್ದಾರೆ.
ಯುವ ಕುಸ್ತಿಪಟು ದೀಪಕ್ ಪೂನಿಯಾ ಪುರುಷರ 86 ಕೆಜಿ ವಿಭಾಗದಲ್ಲಿ ಚಿನ್ನ ದ ಪದಕ ಪಡೆದಿರುವುದಕ್ಕೆ ಅವರಿಗೆ ಅಭಿನಂದನೆಗಳು. ನಿಮ್ಮ ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ವಿಧಾನವು ಪ್ರಭಾವಶಾಲಿಯಾಗಿದೆ. ನೀವು ಭಾರತಕ್ಕೆ ಹೆಚ್ಚಿನ ಸಂತೋಷ ಮತ್ತು ವೈಭವವನ್ನು ತಂದಿದ್ದೀರಿ ಎಂದು ಮುರ್ಮು ಅವರು ತಿಳಿಸಿದ್ದಾರೆ.
ಮಹಿಳೆಯರ 68 ಕೆಜಿ ವಿಭಾಗ ಕುಸ್ತಿಯಲ್ಲಿ ಕಂಚು ಗೆದ್ದಿರುವ ದಿವ್ಯಾ ಕಕ್ರಾನ್ ಭಾರತಕ್ಕೆ ಸಂತೋಷಕರ ಗೆಲುವಿಗೆ ಕಾರಣವಾಯಿತು, ನಿಮ್ಮಂತಹ ಯುವ ಕುಸ್ತಿಪಟುಗಳು ಭಾರತೀಯ ಕ್ರೀಡೆಗಳ ಭವಿಷ್ಯದ ಭರವಸೆಯನ್ನು ತುಂಬಿದ್ದಾರೆ ಎಂದು ಹೇಳಿದ್ದಾರೆ.
ಯುವ ಕುಸ್ತಿಪಟು ಮೋಹಿತ್ ಗ್ರೆವಾಲ್ ಅವರು ಕಂಚಿನ ಪದಕವನ್ನು ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ನೀವು ಅನೇಕ ಸವಾಲುಗಳನ್ನು ಜಯಿಸಿದ್ದೀರಿ. ಇನ್ನೂ ಅನೇಕ ಪ್ರಶಸ್ತಿಗಳನ್ನು ತರಲು ರಾಷ್ಟ್ರವು ನಿಮ್ಮನ್ನು ಎದುರು ನೋಡುತ್ತಿದೆ ಎಂದು ತಿಳಿಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…