ದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯಸ್ಮರಣೆ ಅಂಗವಾಗಿ, ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಇಂದು ಗೌರವ ಸಲ್ಲಿಸಿದರು.
ರಾಷ್ಟ್ರ ರಾಜಧಾನಿಯ ʻಸದೈವ್ ಅಟಲ್ʼಗೆ ಭೇಟಿ ನೀಡಿ ಪ್ರಮುಖ ನಾಯಕರು ಪುಷ್ಪನಮನ ಸಲ್ಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು. ಹಾಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಗೌರವ ಸೂಚಿಸಿದರು.
President Murmu, PM Modi pay floral tribute to Atal Bihari Vajpayee on his death anniversary
Read @ANI Story |https://t.co/LDlpGtKsby#DroupadiMurmu #PMModi #AtalBihariVajpayee #floraltribute pic.twitter.com/yWfVfhigTT
— ANI Digital (@ani_digital) August 16, 2022