Categories: ದೆಹಲಿ

ದೆಹಲಿ: ಕೆಂಪುಕೋಟೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ದೆಹಲಿ:  75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 9ನೇ ಬಾರಿಗೆ ರಾಷ್ಟ್ರಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶ ಹೊಸ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ. ನವಭಾರತದ ಸಾಕಾರಕ್ಕಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ಭಾರತೀಯನಿಗೆ ಈ ದೇಶ ನಮನ ಸಲ್ಲಿಸುತ್ತದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮಾತುಗಳು

  • ಮುಂದಿನ 25 ವರ್ಷಗಳಲ್ಲಿ ಭಾರತ ಬಲಶಾಲಿ ದೇಶವಾಗಿ ಹೊರಹೊಮ್ಮಬೇಕು.
  • ಹೊಸಹಾದಿಯಲ್ಲಿ ನಡೆಯುವುದಕ್ಕೆ ಮುಂದಿನ 5 ವರ್ಷಗಳಿಗಾಗಿ ನಾವು ‘ಪಂಚಪ್ರಾಣ’ವನ್ನು ಅಳವಡಿಸಿಕೊಳ್ಳಬೇಕು. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿಸುವ ದೊಡ್ಡ ಸಂಕಲ್ಪ, ಗುಲಾಮಿತನದ ಎಲ್ಲ ಶೃಂಖಲೆಗಳಿಂದ ಹೊರಬರುವುದು, ನಾವು ಯಾವುದಕ್ಕೆ ವಾರಸುದಾರರಾಗಿದ್ದೇವೋ ಆ ಬಗ್ಗೆ ಹೆಮ್ಮೆ ಹೊಂದುವುದು, ಏಕತೆ, ಐದನೆಯದಾಗಿ ಪ್ರಧಾನಿ-ಮುಖ್ಯಮಂತ್ರಿಗಳೂ ಸೇರಿದಂತೆ ಎಲ್ಲ ನಾಗರೀಕರು ತಮ್ಮ ಕರ್ತವ್ಯಗಳನ್ನು ಪಾಲಿಸುವುದು.
  • ತಮ್ಮ ಭಾಷಣದ ಆರಂಭದಲ್ಲಿಯೇ ಪ್ರಧಾನಿ ಮೋದಿಯವರು ಅಂಬೇಡ್ಕರ್, ನೆಹರು, ಸಾವರ್ಕರ್, ಬುಡಕಟ್ಟು ಹೋರಾಟಗಾರರಾರದ ಬಿರ್ಸಾ ಮುಂಡಾ ಸೇರಿದಂತೆ ಹಲವು ಸ್ವಾತಂತ್ರ್ಯ ಕಲಿಗಳು ಹಾಗೂ ರಾಣಿ ಲಕ್ಷ್ಮೀಬಾಯಿ ಸೇರಿದಂತೆ ಎಲ್ಲ ಮಹಿಳಾ ಹೋರಾಟಗಾರರನ್ನು ನೆನಪಿಸಿಕೊಂಡರು.
  • ಪ್ರಜಾಪ್ರಭುತ್ವ ಮಾದರಿಗಳ ತಾಯಿ ಭಾರತ. ಸ್ವಾತಂತ್ರ್ಯ ಸಿಕ್ಕ ಪ್ರಾರಂಭದಲ್ಲಿ ಈ ದೇಶ ಕೆಲ ದಿನಗಳಲ್ಲೇ ವಿಫಲವಾಗುವುದೆಂಬ ಅನುಮಾನಗಳಿದ್ದವು. ಆದರೆ ಜನ ಅದನ್ನು ತಮ್ಮ ಸಾಮೂಹಿಕ ಯತ್ನದಿಂದ ಸುಳ್ಳಾಗಿಸಿದರು.
  • ನಮ್ಮದು ಮಹತ್ವಾಕಾಂಕ್ಷಿಗಳ ನೆಲ. ಸರ್ಕಾರದ ಕಾರ್ಯಕ್ರಮಗಳಲ್ಲಿ ಜನರೂ ಭಾಗವಹಿಸುವಿಕೆ ಬಯಸುತ್ತಾರೆ. ಇದನ್ನು ಎಲ್ಲ ಸರ್ಕಾರಗಳೂ ಅರ್ಥ ಮಾಡಿಕೊಳ್ಳಬೇಕು.
  • ಭಾರತ ಮೊದಲು ಎಂಬ ಮಂತ್ರವೇ ನಮ್ಮನ್ನು ಮುನ್ನೆಡಸಬೇಕಿದೆ.
  • ಭಾರತದಲ್ಲೇ ತಯಾರಿಸುವ ಮೂಲಕ ದೇಶವನ್ನು ಆತ್ಮನಿರ್ಭರವಾಗಿಸುವುದಕ್ಕೆ ಖಾಸಗಿ ಕಂಪನಿಗಳು ಮುಂದೆ ಬರಬೇಕು.
  • ಇವತ್ತು ಚಿಕ್ಕ ಮಗುವೂ ಆತ್ಮನಿರ್ಭರ ಭಾರತ ಎಂಬ ಘೋಷಣೆಯನ್ನು ಹೇಳುತ್ತಿದೆ.
  • ಆಟದ ಮೈದಾನದಿಂದ ಯುದ್ಧಭೂಮಿವರೆಗೆ ಮಹಿಳೆಯರು ಮುಂದೆ ಬಂದಿದ್ದಾರೆ. ಮುಂದಿನ 25 ವರ್ಷಗಳ ಭಾರತದ ಭವಿಷ್ಯ ರೂಪಿಸುವಲ್ಲಿ ಅವರ ಕೊಡುಗೆ ಗಮನಾರ್ಹವಾಗಲಿದೆ.
  • ಮಹಿಳೆಯರ ಘನತೆ ಕುಗ್ಗಿಸುವ ಏನನ್ನೂ ಮಾಡುವುದಿಲ್ಲ ಎಂಬ ಸಂಕಲ್ಪ ಎಲ್ಲರೂ ಮಾಡಬೇಕಿದೆ.
  • ಶಾಸ್ತ್ರಿಯವರ ಜೈ ಜವಾನ್-ಜೈ ಕಿಸಾನ್ ಜತೆ ವಾಜಪೇಯಿಯವರು ಜೈ ವಿಜ್ಞಾನ್ ಜೋಡಿಸಿದರು. ಇವತ್ತು ನಮ್ಮ ಯುವಜನ ಸಂಶೋಧನೆ ಮತ್ತು ಅಭಿವೃದ್ಧಿಗಳತ್ತ ಹೊರಳುತ್ತಿದ್ದಾರೆ. ಮುಂದಿನ ಆವಿಷ್ಕಾರಗಳು ಬರಲಿರುವುದು ಸಮುದ್ರದಾಳ ಮತ್ತು ಬಾಹ್ಯಾಕಾಶದಿಂದ. ಈ ನಿಟ್ಟಿನಲ್ಲಿ ನಮ್ಮ ಯುವಕರು ತಮ್ಮ ಪ್ರತಿಭೆ ತೋರುತ್ತಿದ್ದಾರೆ.

 

Sneha Gowda

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

42 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago