ನವದೆಹಲಿ: 74ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಈ ವರ್ಷದ ಗಣರಾಜ್ಯೋತ್ಸವವು ವಿಶೇಷವಾಗಿದೆ ಏಕೆಂದರೆ ರಾಷ್ಟ್ರವು ‘ಆಜಾದಿ ಕಾ ಅಮೃತ್’ ಮಹೋತ್ಸವವನ್ನು ಆಚರಿಸುತ್ತಿದೆ ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸು ಮಾಡಲು ಎಲ್ಲರೂ ಒಗ್ಗೂಡಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಈ ಸಂದರ್ಭದಲ್ಲಿ ಶುಭ ಕೋರಿದ್ದಾರೆ.
ಸಂವಿಧಾನದ ಮೂಲಭೂತ ತತ್ವಗಳಾದ ನ್ಯಾಯ, ಸಮಾನತೆ, ಭ್ರಾತೃತ್ವ, ಸಮಾಜವಾದ ಮತ್ತು ಜಾತ್ಯತೀತತೆಯನ್ನು ರಕ್ಷಿಸುವುದು ಇಂದು ಅತ್ಯಂತ ಮುಖ್ಯವಾಗಿದೆ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.