ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವ ಅವರನ್ನು ಪ್ರತಿಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಭಾನುವಾರ ಘೋಷಿಸಲಾಗಿದೆ.
ಉತ್ತರಾಖಂಡ್ ಮತ್ತು ರಾಜಸ್ಥಾನದ ರಾಜ್ಯಪಾಲರೂ ಆಗಿರುವ ಮತ್ತು ಕರ್ನಾಟಕ ಮೂಲದವರಾದ ಆಳ್ವಾ ಅವರ ಹೆಸರನ್ನು ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ವಿರೋಧ ಪಕ್ಷಗಳು ಭೇಟಿಯಾದ ನಂತರ ನಿರ್ಧರಿಸಲಾಯಿತು.
ಎನ್ ಡಿ ಎ ಈ ಹುದ್ದೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಕಣಕ್ಕಿಳಿಸಿದೆ.
ಶನಿವಾರ ಸಂಜೆ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯ ನಂತರ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಅವರು ಧಂಕರ್ ಅವರ ಹೆಸರನ್ನು ಘೋಷಿಸಿದರು.