ನವದೆಹಲಿ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ಸೂಡಾನ್ ಪ್ರಜೆಯನ್ನು ಸೇರಿ ಆರು ಜನರನ್ನು ಬಂಧಿಸಿದ್ದಾರೆ.
“ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸುಡಾನ್ ಪ್ರಯಾಣಿಕನೊಬ್ಬ ಧರಿಸಿದ್ದ ವಿಶೇಷವಾಗಿ ವಿನ್ಯಾಸಗೊಳಿಸಿದ ಬೆಲ್ಟ್ನಿಂದ 5.38 ಕೋಟಿ ರೂ.ಗಳ ಮೌಲ್ಯದ 12 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ” ಎಂದು ಅಧಿಕಾರಿ ಹೇಳಿದರು.
ವಶಪಡಿಸಿಕೊಳ್ಳಲಾದ ೧೨ ಕೆಜಿ ತೂಕದ ಚಿನ್ನವನ್ನು ಆರೋಪಿಗಳು ರಹಸ್ಯವಾಗಿ ತೆರವುಗೊಳಿಸುವ ಉದ್ದೇಶದೊಂದಿಗೆ ಅಧಿಕಾರಿಗಳ ಮುಂದೆ ಘೋಷಿಸಲಿಲ್ಲ ಎಂದು ಅಧಿಕಾರಿ ಹೇಳಿದರು.
“ಆದ್ದರಿಂದ, ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 110 ರ ಅಡಿಯಲ್ಲಿ ಸರಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ನಾವು ಚಿನ್ನದ ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿದ್ದೇವೆ” ಎಂದು ಅಧಿಕಾರಿ ಹೇಳಿದರು.
ಹೆಚ್ಚಿನ ತನಿಖೆ ನಡೆಯುತ್ತಿದೆ.