News Karnataka Kannada
Sunday, April 28 2024
ದೆಹಲಿ

ಹೊಸದಿಲ್ಲಿ: ಏ.14ರಿಂದ ಬಿಜೆಪಿ ಘರ್ ಘರ್ ಜೋಡೊ ಕಾರ್ಯಕ್ರಮ

ಕಾಂಗ್ರೆಸ್  ಸರ್ಕಾರದ ವಿರುದ್ಧ ಎಕ್ಸ್ ಖಾತೆಯಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ ಎಂದು ವ್ಯಂಗ್ಯವಾಡಿದೆ.
Photo Credit : Facebook

ಹೊಸದಿಲ್ಲಿ: ಬಿಜೆಪಿಯ ಎಸ್‌ಸಿ ಮೋರ್ಚಾ ಅಂಬೇಡ್ಕರ್ ಜಯಂತಿ ದಿನವಾದ ಏ.14ರಿಂದ ಘರ್ ಘರ್ ಜೋಡೊ ಕಾರ್ಯಕ್ರಮ ಆರಂಭಿಸಲಿದೆ. ಇದು ಎಸ್‌ಸಿ ಸಮುದಾಯವನ್ನು ತಲುಪುವ ಬಿಜೆಪಿ ನಡೆಸುವ ಯಾತ್ರೆ. 21 ದಿನಗಳ ಈ ಯಾತ್ರೆ ಅಂಬೇಡ್ಕರ್‌ ಜಯಂತಿಯಂದು ಆರಂಭವಾಗಿ ಬುದ್ಧ ಜಯಂತಿ ದಿನವಾದ ಮೇ 5ರಂದು ಕೊನೆಗೊಳ್ಳಲಿದೆ.

ಈ ಕಾರ್ಯಕ್ರಮಕ್ಕಾಗಿ ಬಿಜೆಪಿ ಎಸ್‌ಸಿ ಮೋರ್ಚಾ 11 ಸದಸ್ಯರ ರಾಷ್ಟ್ರೀಯ ಸಮಿತಿಯನ್ನು ರಚಿಸಿದೆ. ಅದೇ ರೀತಿ ರಾಜ್ಯ ಮತ್ತು ಜಿಲ್ಲಾವಾರು ಸಮಿತಿಗಳನ್ನು ಕೂಡ ತಲಾ 11 ಸದಸ್ಯರನ್ನೊಳಗೊಂಡಂತೆ ರಚಿಸಲಾಗುತ್ತಿದೆ. ಸರ್ಕಾರದ ಎಲ್ಲ ಕಲ್ಯಾಣ ಯೋಜನೆಗಳು ಪರಿಶಿಷ್ಟ ಜಾತಿ ಸಮಾಜಕ್ಕೆ ಲಭ್ಯವಾಗುವಂತೆ ನೋಡಿಕೊಳ್ಳುವುದು ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ತಿಳಿಸಿದೆ.

ಇದು ಸಮಾಜಕ್ಕೆ ಮಾಡುವ ಸೇವೆಯಾಗಿದೆ. ಈ ಅಭಿಯಾನದ ಮೂಲಕ ಸರಕಾರದ ಎಲ್ಲ ಕಲ್ಯಾಣ ಯೋಜನೆಗಳ ಪ್ರಯೋಜನವನ್ನು ಪಡೆಯಲು ಎಸ್‌ಸಿ ಸಮುದಾಯಕ್ಕೆ ಸಾಧ್ಯವಾಗುವಂತೆ ನಾವು ಕೆಲಸ ಮಾಡುತ್ತೇವೆ. ಕೊಳೆಗೇರಿಗಳು ಸೇರಿದಂತೆ ಮನೆಮನೆಗೆ ಹೋಗಿ ಪ್ರಚಾರ ಕೈಗೊಳ್ಳಲಾಗುತ್ತದೆ. ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಫಾರ್ಮ್‌ಗಳನ್ನು ಭರ್ತಿ ಮಾಡಲು ಸಹ ಅವರಿಗೆ ನೆರವು ನೀಡಲಿದ್ದೇವೆ ಎಂದು ಸುದ್ದಿಸಂಸ್ಥೆ ಎಎನ್‌ಐಗೆ ಬಿಜೆಪಿ ಎಸ್‌ಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಲಾಲ್ ಸಿಂಗ್ ಆರ್ಯ ಮಾಹಿತಿ ನೀಡಿದ್ದಾರೆ.

21 ದಿನಗಳ ಪ್ರಚಾರದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಿದೆ. ಈ ಕಾರ್ಯಕ್ರಮದ ವೇಳೆ ಸ್ವಚ್ಛತಾ ಅಭಿಯಾನವೂ ನಡೆಯಲಿದೆ ಎಂದರು.ಪರಿಶಿಷ್ಟ ಜಾತಿ ಸಮುದಾಯಗಳ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಬಿಜೆಪಿ ಎಸ್‌ಸಿ ಮೋರ್ಚಾ ಹೆಚ್ಚಿನ ಗಮನ ನೀಡಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು