ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಒಪ್ಪಿಗೆ ನೀಡಿದ್ದಾರೆ.
ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್, ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆ ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ಅಂಕಿತ ದೊರೆತಿದೆ.
ಆಮ್ ಆದ್ಮಿ ನೇತೃತ್ವದ ದೆಹಲಿ ಸರ್ಕಾರ ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಈ ಸೇವಾ ಮಸೂದೆಯನ್ನು ವಿರೋಧಿಸಿದ್ದವು. ”ಕೇಂದ್ರ ಸರ್ಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಮಸೂದೆಯನ್ನು ತಂದಿದೆ. ನಮ್ಮ ಸರ್ಕಾರದ ಮೇಲೆ ಹಿಡಿತವನ್ನು ಸಾಧಿಸಿಲು ಪ್ರಯತ್ನ ಮಾಡುತ್ತಿದೆ” ಎಂದು ಆಪ್ ಆಕ್ರೋಶ ವ್ಯಕ್ತಪಡಿಸಿತ್ತು. ಪ್ರತಿಪಕ್ಷಗಳ ವಿರೋಧದ ನಡುವೆಯೇ ದೆಹಲಿ ಸೇವಾ ಮಸೂದೆಗೆ ಲೋಕ ಸಭೆ ಹಾಗೂ ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿತ್ತು. ಇದೀಗ ಈ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ.