ನವದೆಹಲಿ: ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ರಾಜೀನಾಮೆ ಮತ್ತು ಲೋಕಸಭಾ ಚುನಾವಣೆಗೆ ಮುನ್ನ ಅನೂಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಖಾಲಿ ಇರುವ ಎರಡೂ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಭಾರತದ ನೂತನ ಚುನಾವಣಾ ಆಯುಕ್ತರಾಗಿ ರಾಜೇಶ್ ಕುಮಾರ್ ಗುಪ್ತಾ ಮತ್ತು ಪ್ರಿಯಾಂಶ್ ಶರ್ಮಾ ಅವರನ್ನು ಚುನಾವಣಾ ಆಯೋಗ ನೇಮಕ ಮಾಡಿದೆ.
ಆಯ್ಕೆಗೂ ಮುನ್ನ ಈ ಇಬ್ಬರ ಹೆಸರುಗಳ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ನಡೆದಿತ್ತು ಈಗ ರಾಜೇಶ್ ಕುಮಾರ್ ಗುಪ್ತಾ ಮತ್ತು ಪ್ರಿಯಾಂಶ್ ಶರ್ಮಾ ಅವರ ಹೆಸರುಗಳನ್ನು ಅನುಮೋದಿಸಲಾಗಿದೆ. ಮುಖ್ಯ ಚುನಾವಣಾ ಆಯುಕ್ತರು ರಾಜೀವ್ ಕುಮಾರ್ ಅವರ ಸಹಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಅರುಣ್ ಗೋಯಲ್ ದಿಢೀರ್ ರಾಜೀನಾಮೆ: ಮಾರ್ಚ್ 9 ರಂದು ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ಲೋಕಸಭಾ ಚುನಾವಣೆ 2024 ರ ಸಿದ್ಧತೆಗಳ ನಡುವೆ ರಾಜೀನಾಮೆ ನೀಡಿದರು.