ದೆಹಲಿ: ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಹಾಗು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಬೆಳಗ್ಗೆ ಹಠಾತ್ ದಾಳಿ ನಡೆಸಿದೆ.
ನಿಷೇಧಿತ ಸಂಘಟನೆ ಪಿಎಫ್ಐ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಎನ್ಐಎ ದೇಶದ ಹತ್ತಾರು ಕಡೆ ದಾಳಿ ನಡೆಸಿದೆ. ಕಳೆದ ವರ್ಷ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ ಅಡಿಯಲ್ಲಿ ಪಿಎಫ್ಐ ಅನ್ನು ನಿಷೇಧಿಸಲಾಗಿತ್ತು.
ಲಕ್ನೋದ ಮಡೆಗಂಜ್ನ ಬಡಿ ಪಕಾರಿಯಾ ಪ್ರದೇಶದ ಮೇಲೆ ಏಜೆನ್ಸಿ ದಾಳಿ ನಡೆಸಿತು. ಮತ್ತೊಂದೆಡೆ, ಮಹಾರಾಷ್ಟ್ರದಲ್ಲಿ ಅನೇಕ ಸ್ಥಳಗಳಲ್ಲಿ ಎನ್ಐಎ ಪಿಎಫ್ಐ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ತಿಳಿದು ಬಂದಿದೆ.
ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ 7/11 ರೈಲು ಸ್ಫೋಟದ ಖುಲಾಸೆಗೊಂಡ ಆರೋಪಿ ಅಬ್ದುಲ್ ವಾಹಿದ್ ಶೇಖ್ ಅವರ ನಿವಾಸದ ಮೇಲೆ ತನಿಖಾ ಸಂಸ್ಥೆ ದಾಳಿ ನಡೆಸುತ್ತಿದೆ. ಶೇಖ್ ಪಿಎಫ್ಐ ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಲಾಗಿದೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲೂ ಶೋಧ ನಡೆಸಲಾಗುತ್ತಿದೆ.