ದೆಹಲಿ: ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಹಾಗು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಬೆಳಗ್ಗೆ ಹಠಾತ್ ದಾಳಿ ನಡೆಸಿದೆ.
ನಿಷೇಧಿತ ಸಂಘಟನೆ ಪಿಎಫ್ಐ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಎನ್ಐಎ ದೇಶದ ಹತ್ತಾರು ಕಡೆ ದಾಳಿ ನಡೆಸಿದೆ. ಕಳೆದ ವರ್ಷ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ ಅಡಿಯಲ್ಲಿ ಪಿಎಫ್ಐ ಅನ್ನು ನಿಷೇಧಿಸಲಾಗಿತ್ತು.
ಲಕ್ನೋದ ಮಡೆಗಂಜ್ನ ಬಡಿ ಪಕಾರಿಯಾ ಪ್ರದೇಶದ ಮೇಲೆ ಏಜೆನ್ಸಿ ದಾಳಿ ನಡೆಸಿತು. ಮತ್ತೊಂದೆಡೆ, ಮಹಾರಾಷ್ಟ್ರದಲ್ಲಿ ಅನೇಕ ಸ್ಥಳಗಳಲ್ಲಿ ಎನ್ಐಎ ಪಿಎಫ್ಐ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ತಿಳಿದು ಬಂದಿದೆ.
ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ 7/11 ರೈಲು ಸ್ಫೋಟದ ಖುಲಾಸೆಗೊಂಡ ಆರೋಪಿ ಅಬ್ದುಲ್ ವಾಹಿದ್ ಶೇಖ್ ಅವರ ನಿವಾಸದ ಮೇಲೆ ತನಿಖಾ ಸಂಸ್ಥೆ ದಾಳಿ ನಡೆಸುತ್ತಿದೆ. ಶೇಖ್ ಪಿಎಫ್ಐ ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಲಾಗಿದೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲೂ ಶೋಧ ನಡೆಸಲಾಗುತ್ತಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…