News Karnataka Kannada
Sunday, May 12 2024
ದೆಹಲಿ

ಆಗಸ್ಟ್ 8ಕ್ಕೆ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ: ಪ್ರಧಾನಿ ಉತ್ತರ ಯಾವಾಗ ?

pm modi
Photo Credit : News Kannada

ವದೆಹಲಿ: ಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟ INDIA ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯನ್ನು ಆಗಸ್ಟ್ 8ರಿಂದ 10ರವರೆಗೆ ನಡೆಸಲು ನಿರ್ಧರಿಸಿದೆ.

ತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10 ರಂದು ಉತ್ತರ ನೀಡಲಿದ್ದಾರೆ. ವಿರೋಧ ಪಕ್ಷಗಳ ಪರವಾಗಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಅವಿಶ್ವಾಸ ನಿರ್ಣಯ ಮಂಡಿಸಿದರು. ಸೋನಿಯಗಾಂಧಿ, ಫಾರೂಕ್ ಅಬ್ದುಲ್ಲಾ ಸೇರಿದಂತೆ ಐವತ್ತಕ್ಕೂ ಹೆಚ್ಚು ಸಂಸದರು ನಿರ್ಣಯಕ್ಕೆ ಬೆಂಬಲ ನೀಡಿದ್ದರು. ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ದಿನಾಂಕ ನಿಗದಿ ಮಾಡಿರುವುದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಆಗಸ್ಟ್ 8ರಿಂದ 10ರ ಬದಲಿಗೆ ನಾಳೆಯೇ ಚರ್ಚೆ ನಡೆಯಬೇಕು ಎಂದು ಹಲವು ನಾಯಕರು ಪಟ್ಟು ಹಿಡಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು