ದೆಹಲಿ: ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಚರ್ಚೆಯಾಗುತ್ತಿರುವ ‘ಅವಧಿಗೆ ಮುನ್ನ ಲೋಕಸಭಾ ಚುನಾವಣೆ’ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸ್ಪಷ್ಟನೆ ನೀಡಿದ್ದಾರೆ. “ಲೋಕಸಭೆ ಚುನಾವಣೆಯನ್ನು ಅವಧಿಗೆ ಮುನ್ನವೇ ನಡೆಸಲು ಕೇಂದ್ರ ಯೋಚಿಸುತ್ತಿಲ್ಲ” ಎಂದು ಹೇಳಿದ್ದಾರೆ.
ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅವಧಿಯ ಕೊನೆಯ ದಿನದವರೆಗೆ ಜನರ ಸೇವೆ ಮಾಡಲು ಬಯಸುತ್ತಾರೆ ಎಂದು ಇಂಡಿಯಾ ಟುಡೇ ಜತೆಗಿನ ಸಂದರ್ಶನದಲ್ಲಿ ಅನುರಾಗ್ ಠಾಕೂರ್ ಹೇಳಿದ್ದಾರೆ.
ಮುಂಬರುವ ಸುತ್ತಿನ ವಿಧಾನಸಭಾ ಚುನಾವಣೆಗಳನ್ನು ಸಾರ್ವತ್ರಿಕ ಚುನಾವಣೆಯೊಂದಿಗೆ ನಡೆಸಲು ಸರ್ಕಾರವು ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಸಚಿವರು ಹೇಳಿದರು. ಚುನಾವಣೆ ಮೊದಲು ಅಥವಾ ವಿಳಂಬವಾಗಲಿದೆ ಎಂಬ ಎಲ್ಲಾ ಮಾತುಗಳನ್ನು “ಮಾಧ್ಯಮ ಊಹೆ” ಎಂದು ಅವರು ಹೇಳಿದರು.
ಸರ್ಕಾರವು ಒಂದು ರಾಷ್ಟ್ರ- ಒಂದು ಚುನಾವಣೆಯ ಕುರಿತು ಸಮಿತಿಯನ್ನು ಸ್ಥಾಪಿಸಿದೆ. ಒಂದು ರಾಷ್ಟ್ರ- ಒಂದು ಚುನಾವಣೆಗೆ ಮಾನದಂಡಗಳನ್ನು ಅಂತಿಮಗೊಳಿಸುವ ಮೊದಲು ಸಮಿತಿಯು ಸಂಬಂಧಿತರೊಂದಿಗೆ ವ್ಯಾಪಕವಾದ ಚರ್ಚೆಗಳನ್ನು ಮಾಡುತ್ತದೆ” ಎಂದು ಕೇಂದ್ರ ಸಚಿವ ಠಾಕೂರ್ ಹೇಳಿದರು.
ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…
17ನೇ ಆವೃತ್ತಿಯ ಐಪಿಎಲ್ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…
ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…
ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…