ನವದೆಹಲಿ: ಮಣಿಪುರದ ಬಿಕ್ಕಟ್ಟನ್ನು ಬಳಸಿಕೊಂಡು ಭಯೋತ್ಪಾದನಾ ಕೃತ್ಯ ಎಸಗಲು ಹೊಂಚು ಹಾಕುತ್ತಿದ್ದ ಶಂಕಿತ ಭಯೋತ್ಪಾದಕನನ್ನು ಮಣಿಪುರದ ಬೆಟ್ಟದ ಜಿಲ್ಲೆ ಚುರಾಚಂದ್ಪುರದಲ್ಲಿ ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ.
ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ನಲ್ಲಿನ ಭಯೋತ್ಪಾದಕ ನಾಯಕರನ್ನು ಒಳಗೊಂಡಿರುವ ಅಂತರಾಷ್ಟ್ರೀಯ ಸಂಚಿನ ಭಾಗವಾಗಿ ಈತ ಕಾರ್ಯನಿರ್ವಹಿಸುತ್ತಿದ್ದ ಎಂದು ಎನ್ ಐಎ ಹೇಳಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಎಕ್ಸ್ನಲ್ಲಿ ಭಯೋತ್ಪಾದಕ ಸೆಮಿನ್ಲುನ್ ಗ್ಯಾಂಗ್ಟೆ “ಜನಾಂಗೀಯ ಶೋಷಣೆಯ ಮೂಲಕ ಭಾರತದ ವಿರುದ್ಧ ಯುದ್ಧ ನಡೆಸಲು ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ನಾಯಕತ್ವದ ಪಿತೂರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಹೇಳಿದೆ.