Categories: ದೆಹಲಿ

25 ರೂಪಾಯಿಗೆ ಒಂದು ಕೆಜಿ ಅಕ್ಕಿ ವಿತರಿಸಲು ಕ್ರಮ

ನವದೆಹಲಿ: ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ತಡೆಯೊಡ್ಡಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಅದರ ಭಾಗವಾಗಿಯೇ ಕೆಜಿಗೆ 25ರೂ. ರಿಯಾಯ್ತಿ ದರದಲ್ಲಿ ‘ಭಾರತ್ ಅಕ್ಕಿ’ ಒದಗಿಸಲು ಮುಂದಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಗೋಧಿ ಹಿಟ್ಟನ್ನು ‘ಭಾರತ್ ಅಟ್ಟಾ’ ಹಾಗೂ ಬೇಳೆ ಕಾಳುಗಳನ್ನು ‘ಭಾರತ್ ದಾಲ್’ ಎಂಬ ಹೆಸರಿನಲ್ಲಿ ರಿಯಾಯ್ತಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಈಗ ಅದೇ ಹಾದಿಯಲ್ಲಿ ಅಕ್ಕಿಯನ್ನು ಒದಗಿಸಲು ಮುಂದಾಗಿದೆ.

ಇನ್ನು ಭಾರತ್ ಅಕ್ಕಿಯನ್ನು ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (ನಾಫೆಡ್), ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್ ಸಿಸಿಎಫ್), ಕೇಂದ್ರೀಯ ಭಂಡಾರ್ ಮಳಿಗೆಗಳು ಹಾಗೂ ಮೊಬೈಲ್ ವ್ಯಾನ್ ಗಳು ಸೇರಿದಂತೆ ಸರ್ಕಾರಿ ಸಂಸ್ಥೆಗಳ ಮೂಲಕ ಒದಗಿಸುವ ಸಾಧ್ಯತೆಯಿದೆ.

ಅಕ್ಕಿಯ ಬೆಲೆಯಲ್ಲಿ ದೇಶಾದ್ಯಂತ ಭಾರೀ ಏರಿಕೆ ಕಂಡುಬಂದಿದೆ. ಅಖಿಲ ಭಾರತ ಮಟ್ಟದಲ್ಲಿ ಅಕ್ಕಿಯ ಸರಾಸರಿ ರಿಟೇಲ್ ಬೆಲೆ ಕೆಜಿಗೆ 43.3ರೂ. ತಲುಪಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 14.1ರಷ್ಟು ದರ ಏರಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ತಡೆ ಹಾಕೋದು ಹಾಗೂ ಹಣದುಬ್ಬರ ನಿಯಂತ್ರಿಸೋದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಯೊಬ್ಬರು ನೀಡಿದ್ದಾರೆ. ಪ್ರಸ್ತುತ ಸರ್ಕಾರ ಭಾರತ್ ಗೋಧಿ ಹಿಟ್ಟನ್ನು ಕೆಜಿಗೆ 27.50ರೂ. ದರದಲ್ಲಿ ಹಾಗೂ ಕಡಲೆ ಬೇಳೆಯನ್ನು ಕೆಜಿಗೆ 60 ರೂ. ದರದಲ್ಲಿ ಒದಗಿಸುತ್ತಿದೆ. ಇನ್ನು ಈ ಉತ್ಪನ್ನಗಳನ್ನು 2,000ಕ್ಕೂ ಅಧಿಕ ರಿಟೇಲ್ ಶಾಪ್ ಗಳಲ್ಲಿ ವಿತರಿಸಲಾಗುತ್ತಿದೆ. ಭಾರತ್ ರೈಸ್ ಮಾರಾಟ ಪ್ರಕ್ರಿಯೆ ಕೂಡ ಭಾರತ್ ದಾಲ್ ಹಾಗೂ ಭಾರತ್ ಅಟ್ಟಾ ಮಾದರಿಯಲ್ಲೇ ನಡೆಯಲಿದೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago