News Karnataka Kannada
Monday, April 29 2024
ದೆಹಲಿ

ಈರುಳ್ಳಿ ರಫ್ತಿಗೆ ಶೇ. 40 ಸುಂಕ ವಿಧಿಸಿದ ಸರ್ಕಾರ

Onion exports Govt imposes 40 tariffs
Photo Credit : News Kannada

ಹೊಸದಿಲ್ಲಿ: ಈರುಳ್ಳಿ ರಫ್ತಿನ ಮೇಲೆ ಕೇಂದ್ರ ಸರ್ಕಾರ ಡಿಸೆಂಬರ್ 31ರವರೆಗೆ ಶೇ.40 ರಫ್ತು ಸುಂಕ ವಿಧಿಸಿದೆ. ಈ ಕುರಿತು ಶನಿವಾರ ಅಧಿಸೂಚನೆ ಹೊರಡಿಸಲಾಗಿದೆ.

ಕಳೆದ ಕೆಲವು ವಾರಗಳಿಂದ ಈರುಳ್ಳಿ, ಆಲೂಗಡ್ಡೆ, ಟೊಮ್ಯಾಟೊ ಸೇರಿದಂತೆ ಹಲವು ತರಕಾರಿಗಳ ಬೆಲೆ ಗಗನಕ್ಕೇರಿದೆ. ಈ ನಿಟ್ಟಿನಲ್ಲಿ ಈರುಳ್ಳಿ ದರ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

ಟೊಮೆಟೊ ಬೆಲೆ ನಿಯಂತ್ರಿಸುವ ಉದ್ದೇಶದಿಂದ ಆಗಸ್ಟ್ 20 ರಿಂದ ಟೊಮೆಟೊವನ್ನು ಕೆಜಿಗೆ 40 ರೂ.ಗಳಂತೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ.

ಆಗಸ್ಟ್ 20 ರಿಂದ ಕೆಜಿಗೆ 40 ರೂ ನಲ್ಲಿ ಟೊಮ್ಯಾಟೊ ಮಾರಾಟ ಮಾಡುವಂತೆ ಗ್ರಾಹಕ ವ್ಯವಹಾರಗಳ ಇಲಾಖೆ NAFED ಮತ್ತು NCCF ಗೆ ನಿರ್ದೇಶನ ನೀಡಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯ ಶುಕ್ರವಾರ ಈ ನಿರ್ಧಾರವನ್ನು ಪ್ರಕಟಿಸಿದ್ದು, ಜುಲೈ 14 ರಿಂದ ಇಲ್ಲಿಯವರೆಗೆ 15 ಲಕ್ಷ ಕೆಜಿಗೂ ಹೆಚ್ಚು ಟೊಮ್ಯಾಟೊವನ್ನು NAFED ಮತ್ತು NCCF ಖರೀದಿಸಿದೆ ಎಂದು ಹೇಳಿದೆ.

ಕಳೆದ ಒಂದು ತಿಂಗಳಲ್ಲಿ ದೆಹಲಿ-ಎನ್‌ಸಿಆರ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಬಿಹಾರದಂತಹ ಸ್ಥಳಗಳಲ್ಲಿ ಎರಡು ಏಜೆನ್ಸಿಗಳು ದೇಶಾದ್ಯಂತ ಸಬ್ಸಿಡಿ ದರದಲ್ಲಿ ಟೊಮೆಟೊಗಳನ್ನು ಮಾರಾಟ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು