ನವದೆಹಲಿ: ಇಸ್ರೇಲ್ನಲ್ಲಿ ಹಮಾಸ್ ಉಗ್ರರ ನಡುವಿನ ಯುದ್ಧ ಮುಂದುವರೆದಿದೆ. ಈ ನಡುವೆ ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಪ್ರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಹೇಳಿದ್ದಾರೆ.
ಇಸ್ರೇಲ್ನಿಂದ ಹಿಂದಿರುಗಲು ಬಯಸುವ ಭಾರತದ ನಾಗರಿಕರಿಗೆ ಅನುಕೂಲವಾಗುವಂತೆ ‘ಆಪರೇಷನ್ ಅಜಯ್’ ಅನ್ನು ಪ್ರಾರಂಭಿಸಲಾಗುತ್ತಿದ್ದು, ವಿಶೇಷ ಚಾರ್ಟರ್ ವಿಮಾನಗಳು ಮತ್ತು ಇನ್ನಿತರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಜೈಶಂಕರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿದೇಶದಲ್ಲಿರುವ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಜೈಶಂಕರ್ ಅವರು ತಿಳಿಸಿದ್ದಾರೆ.
ಇಸ್ರೇಲ್ ಹಾಗೂ ಹಮಾಸ್ ಉಗ್ರಗಾಮಿಗಳ ಯುದ್ಧ ತೀವ್ರ ಸ್ವರೂಪೆ ಪಡೆಯುತ್ತಿರುವ ಹಿನ್ನಲೆಯಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆಯ ಬಗ್ಗೆ ಇದೀಗ ಕಳವಳ ವ್ಯಕ್ತಪಡಿಸಲಾಗುತ್ತಿದೆ. ಇಸ್ರೇಲ್ನಲ್ಲಿ ನೆಲೆಸಿರುವ 18,000 ಭಾರತೀಯ ಪ್ರಜೆಗಳಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಇದುವರೆಗೆ ಯಾವುದೇ ಮನವಿಗಳು ಬಂದಿಲ್ಲವಾದ್ದರಿಂದ ನಾಗರಿಕರನ್ನು ಸ್ಥಳಾಂತರಿಸುವ ಯಾವುದೇ ಯೋಜನೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು. ಇದೀಗ ಸ್ಥಳಾಂತರ ಕಾರ್ಯಾಚರಣೆ ಆರಂಭವಾಗಿದೆ.
Launching #OperationAjay to facilitate the return from Israel of our citizens who wish to return.
Special charter flights and other arrangements being put in place.
Fully committed to the safety and well-being of our nationals abroad.
— Dr. S. Jaishankar (@DrSJaishankar) October 11, 2023