ನವದೆಹಲಿ: ಕಳೆದ ವಾರ ಕಡಲ್ಗಳ್ಳರ ಆಕ್ರಮಣಕ್ಕೆ ಒಳಗಾಗಿದ್ದ ಇರಾನ್ನ ಮೀನುಗಾರಿಕಾ ದೋಣಿಯನ್ನು ಭಾರತದ ನೌಕಾಪಡೆ ರಕ್ಷಣೆ ಮಾಡಿತ್ತು. ಯೆಮೆನ್ನ ಸೊಕೋತ್ರ ದ್ವೀಪದ ಸಮುದ್ರದ ಭಾಗದಲ್ಲಿ ಈ ಘಟನೆ ನಡೆದಿತ್ತು. ಭಾರತದ ನೌಕಾಪಡೆಯ ಐಎನ್ಎಸ್ ಸುಮೇಧಾ ಮಾರ್ಚ್ 29ರಂದು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈ ದೋಣಿಯನ್ನು ಕಡಲ್ಗಳ್ಳರಿಂದ ರಕ್ಷಿಸಿತ್ತು. 12 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆದಿತ್ತು. ಈ ಮೀನುಗಾರಿಕಾ ದೋಣಿಯಲ್ಲಿ 23 ಪಾಕಿಸ್ತಾನೀ ಮೀನುಗಾರರು ಇದ್ದರು.
ಭಾರತದ ನೌಕಾಪಡೆಯ ಕಾರ್ಯಾಚರಣೆ ಬಳಿಕ ಈ ಪಾಕಿಸ್ತಾನೀಯರು ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತ ಜಿಂದಾಬಾದ್ ಎಂದು ಹೇಳಿ ತಮ್ಮ ಕೃತಜ್ಞತೆ ತೋರ್ಪಡಿಸಿದ್ದಾರೆ.ಈ ದೋಣಿಯ ಮುಖ್ಯಸ್ಥರಾದ ಆಮೀರ್ ಖಾನ್ ವಿಡಿಯೋ ರೆಕಾರ್ಡ್ನಲ್ಲಿ ಮೆಸೇಜ್ ಬಿಡುಗಡೆ ಮಾಡಿದ್ದಾರೆ.
Successful Anti-Piracy Operation by the #IndianNavy.
After successfully forcing surrender of the nine armed pirates, #IndianNavy’s specialist teams have completed sanitisation & seaworthiness checks of FV Al-Kambar.
The crew comprising 23 Pakistani nationals were given a thorough… https://t.co/APEyIWmU9e pic.twitter.com/c6TbfL4Jrc— SpokespersonNavy (@indiannavy) March 30, 2024