ನವದೆಹಲಿ: ದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ ಪತಂಜಲಿ ಆಯುರ್ವೇದ ಕಂಪನಿ ಉನ್ನತ ನ್ಯಾಯಾಲಯದ ಬಳಿ ಕ್ಷಮೆ ಕೋರಿದೆ.
ಪತಂಜಲಿ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಆಚಾರ್ಯ ಬಾಲಕೃಷ್ಣ ಅವರು ಇಂದು ಸುಪ್ರೀಂಕೋರ್ಟ್ಗೆ ಅಫಿಡೆವಿಟ್ ಸಲ್ಲಿಸಿದ್ದು, ತಮ್ಮ ತಪ್ಪು ಜಾಹಿರಾತುಗಳ ಬಗ್ಗೆ ಪಶ್ಚಾತಾಪ ವ್ಯಕ್ತಪಡಿಸಿ, ಕ್ಷಮೆಯಾಚಿಸಿದ್ದಾರೆ.
ಆಯುರ್ವೇದದ ಮೂಲಕ ಜೀವನಶೈಲಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪರಿಹಾರಗಳನ್ನು ಒದಗಿಸುವ ಮೂಲಕ ದೇಶದ ಆರೋಗ್ಯ ಮೂಲಸೌಕರ್ಯದ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ನಮ್ಮ ಪತಂಜಲಿ ಕಂಪನಿಯ ಅನ್ವೇಷಣೆಯಾಗಿದೆ ಎಂದು ಸ್ಪಷ್ಟಪಡಿಸಿರುವ ಬಾಲಕೃಷ್ಣ, ಭವಿಷ್ಯದಲ್ಲಿ ಇಂತಹ ತಪ್ಪು ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.