News Karnataka Kannada
Monday, May 06 2024
ದೆಹಲಿ

ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ಐಸಿಯುಗೆ ದಾಖಲಿಸುವಂತಿಲ್ಲ

ಕೇಂದ್ರ ಸರ್ಕಾರ ಹೊಸದೊಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ರೋಗಿ ಅಥವಾ ಆತನ ಕುಟುಂಬಸ್ಥರು ಒಪ್ಪಿಗೆ ನೀಡಿದರೆ ಮಾತ್ರ ಆತನಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದಾಗಿದೆ. ಬಲವಂತವಾಗಿ ಯಾವುದೇ ರೋಗಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುವಂತಿಲ್ಲ ಎಂದು ಹೇಳಿದೆ.
Photo Credit : Freepik

ನವದೆಹಲಿ: ಕೇಂದ್ರ ಸರ್ಕಾರ ಹೊಸದೊಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ರೋಗಿ ಅಥವಾ ಆತನ ಕುಟುಂಬಸ್ಥರು ಒಪ್ಪಿಗೆ ನೀಡಿದರೆ ಮಾತ್ರ ಆತನಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದಾಗಿದೆ. ಬಲವಂತವಾಗಿ ಯಾವುದೇ ರೋಗಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುವಂತಿಲ್ಲ ಎಂದು ಹೇಳಿದೆ.

ಈ ನಿರ್ಧಾರವನ್ನು 24 ಮಂದಿ ತಜ್ಞರು ಚರ್ಚಿಸಿ ಮಾಡಿದ್ದಾರೆ. ರೋಗಿಗೆ ಹೆಚ್ಚಿನ ಚಿಕಿತ್ಸೆ ಪ್ರಯೋಜನವಿಲ್ಲದಿದ್ದಲ್ಲಿ ಅಥವಾ ಯಾವುದೇ ಚಿಕಿತ್ಸೆಯಿಂದ ರೋಗಿಯ ಆರೋಗ್ಯದಲ್ಲಿ ಚೇತರಿಕೆ ಕಾಣಲು ಸಾಧ್ಯವಾಗದಿದ್ದಲ್ಲಿ ಆತ ಅಥವಾ ಆಕೆಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸುವುದು ವ್ಯರ್ಥ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಂಕ್ರಾಮಿಕ ರೋಗಗಳು, ವಿಪತ್ತು ಸಂದರ್ಭಗಳಲ್ಲಿ ರೋಗಿಯನ್ನು ಐಸಿಯುಗೆ ದಾಖಲಿಸಬಹುದು. ರೋಗಿಯ ಅಂಗಾಂಗ ವೈಫಲ್ಯ, ಅಂಗಾಂಗ ಕಸಿ ಅಥವಾ ಹದಗೆಡುತ್ತಿರುವ ವೈದ್ಯಕೀಯ ಸ್ಥಿತಿಯನ್ನು ಅವಲೋಕಿಸಿ ಐಸಿಯುಗೆ ಪ್ರವೇಶ ನೀಡಬೇಕು. ಅಲ್ಲದೆ ರೋಗಿಯ ಪ್ರಜ್ಞಾಹೀನತೆ, ಹೆಮೊಡೈನಮಿಕ್ ಅಸ್ಥಿರತೆ, ಉಸಿರಾಟದ ಸಮಸ್ಯೆ ಹೀಗೆ ತೀವ್ರವಾಗಿ ಅನಾರೋಗ್ಯ ಪೀಡಿತರಾಗಿದ್ದರೆ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದು ಎಂದು ರೂಲ್ಸ್‌ನಲ್ಲಿ ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು