ನವದೆಹಲಿ: ‘ಪೀರಿಯೆಡ್ ಲೀವ್’ ನೀಡುವ ಕುರಿತ ಕೇಂದ್ರ ಸಚಿವೆ ಸ್ಮೃತಿ ಇರಾನಿ ನೀಡಿರುವ ಹೇಳಿಕೆಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಬೆಂಬಲವನ್ನು ಸೂಚಿಸಿದ್ದಾರೆ.
ಋತುಚಕ್ರ ಮಹಿಳೆಯರ ಜೀವನದ ನೈಸರ್ಗಿಕ ಭಾಗ. ಇದು ಅಂಗವಿಕಲತೆ ಎಂದು ಪರಿಗಣಿಸಬಾರದು ಎಂದು ಗುರುವಾರ ರಾಜ್ಯ ಸಭೆಯಲ್ಲಿ ಸಚಿವೆ ಸ್ಮೃತಿ ಇರಾನಿಯವರು ಪೀರಿಯೆಡ್ ಲೀವ್ ಕುರಿತು ಪ್ರಸ್ತಾಪ ಮಾಡಿದರು
ಇರಾನಿ ಹೇಳಿಕೆಯನ್ನು ನಟಿ ತಮ್ಮ ಇನ್ ಸ್ಟಾ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಮನುಕುಲದ ಇತಿಹಾಸದಲ್ಲಿ ದುಡಿಯದ ಮಹಿಳೆ ಇಲ್ಲವೇ ಇಲ್ಲ. ವ್ಯವಸಾಯದಿಂದ ಹಿಡಿದು ಮನೆ ಕೆಲಸ, ಮಕ್ಕಳನ್ನು ಬೆಳೆಸುವವರೆಗೆ ಹೀಗೆ ಪ್ರತಿ ದಿನ ಕೆಲಸ ಮಾಡುತ್ತಲೇ ಇರುತ್ತಾರೆ. ಕುಟುಂಬ ಸಮುದಾಯ ಅಥವಾ ರಾಷ್ಟ್ರದ ಮೇಲಿನ ಅವರ ಬದ್ಧತೆಗೆ ಯಾವ ವಿಚಾರಗಳು ಅಡ್ಡಿಯಾಗುವುದಿಲ್ಲ. ಹೀಗಾಗಿ ಪೀರಿಯೆಡ್ ಸಮಯದಲ್ಲಿ ಮಹಿಳೆಯರಿಗೆ ರಜೆಯ ಅವಶ್ಯಕತೆ ಇಲ್ಲ. ಇದು ಋತುಚಕ್ರವೇ ಹೊರತು ರೋಗ ಅಥವಾ ಅಂಗವಿಕಲತೆ ಅಲ್ಲ ಎಂಬುದನ್ನು ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.