ನವದೆಹಲಿ: ಹಿಂಡೆನ್ಬರ್ಗ್ ವರದಿಯ ಹಿನ್ನೆಲೆಯಲ್ಲಿ ಅದಾನಿ ಗ್ರೂಪ್ ಆಫ್ ಕಂಪನಿಗಳ ವಿರುದ್ಧ ತನಿಖೆಯನ್ನು ಕೋರಿ ಕಾಂಗ್ರೆಸ್ ನಾಯಕರೊಬ್ಬರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
“ದೊಡ್ಡ ಪ್ರಮಾಣದ ಸಾರ್ವಜನಿಕ ಹಣವನ್ನು ಹೂಡಿಕೆ ಮಾಡಿದ ಆರೋಪದ ಮೇಲೆ ಜೀವ ವಿಮಾ ನಿಗಮ (ಎಲ್ಐಸಿ) ಮತ್ತು ಎಸ್ಬಿಐ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.
ವಕೀಲ ವರೀಂದರ್ ಕುಮಾರ್ ಶರ್ಮಾ ಮೂಲಕ ಕೈ ನಾಯಕ ಜಯ ಠಾಕೂರ್ ಅವರು ಸಲ್ಲಿಸಿದ ಮನವಿಯಲ್ಲಿ ವಿವಿಧ ತನಿಖಾ ಸಂಸ್ಥೆಗಳಿಂದ ಲಕ್ಷಾಂತರ ಕೋಟಿ ಸಾರ್ವಜನಿಕ ಹಣ ಮತ್ತು ಸರ್ಕಾರದ ಬೊಕ್ಕಸದ ಹಣವನ್ನು ವಂಚಿಸಿದ ಅದಾನಿ ಗ್ರೂಪ್ ಆಫ್ ಕಂಪನಿಗಳ ವಿರುದ್ಧ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ಗೆ ಒತ್ತಾಯಿಸಲಾಗಿದೆ.
ಜನವರಿ 24 ರಂದು ಹಿಂಡೆನ್ಬರ್ಗ್ ರಿಸರ್ಚ್ ವರದಿಯು ಬಹಿರಂಗಪಡಿಸಿದ ನಂತರ, ಅದಾನಿ ಗ್ರೂಪ್ ಆಫ್ ಕಂಪನಿಗಳ ಷೇರು ಬೆಲೆ ತೀವ್ರವಾಗಿ ಕುಸಿದಿದೆ .