ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಖಾತೆಯ ಕವರ್ ಇಮೇಜ್ ಬದಲಿಸಿದ್ದಾರೆ. G20 ಶೃಂಗಸಭೆಯ ಅಧಿಕೃತ ಸ್ಥಳವಾದ ಭಾರತ್ ಮಂಟಪದ ಮುಂದೆ ಸ್ಥಾಪಿಸಲಾದ ಬೃಹತ್ ನಟರಾಜನ ಪ್ರತಿಮೆಯ ಚಿತ್ರವನ್ನು ಮೋದಿ ಇಲ್ಲಿ ಬಳಸಿದ್ದಾರೆ.
ಪ್ರಕಾಶಮಾನವಾಗಿ ಬೆಳಗುತ್ತಿರುವ ಭಾರತ ಮಂಟಪದ ಮುಂದೆ ನಟರಾಜ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಸೇರಿದಂತೆ ವಿಶ್ವದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ನವದೆಹಲಿಯ ಭಾರತ್ ಮಂಟಪಂ ಎಂದೂ ಕರೆಯಲ್ಪಡುವ ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕಮ್-ಕನ್ವೆನ್ಷನ್ ಸೆಂಟರ್ (ಐಇಸಿಸಿ) ಸಂಕೀರ್ಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಈ ವರ್ಷ ಜುಲೈ 26 ರಂದು ಪ್ರಧಾನಿ ಮೋದಿ ಅವರು ಈ ಸಂಕೀರ್ಣವನ್ನು ಉದ್ಘಾಟಿಸಿದ್ದರು.