ನವದೆಹಲಿ: ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ ಎಲ್-1 ನೌಕೆ ಉಡಾವಣೆ ಯಶಸ್ವಿಯಾಗಿದೆ. 4ನೇ ಹಂತದಲ್ಲೂ ನೌಕೆ-ರಾಕೆಟ್ ಬೇರ್ಪಡುವ ಕಾರ್ಯ ಯಶಸ್ವಿಯಾಗಿದೆ. ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ಎಲ್ಲರಿಗೂ ಇಸ್ರೋ ಮುಖ್ಯಸ್ಥ ಸೋಮನಾಥ್ ಅಭಿನಂದನೆ ಸಲ್ಲಿಸಿದ್ದಾರೆ.
ಸಂಪೂರ್ಣ ಮಾನವನ ಕಲ್ಯಾಣಕ್ಕಾಗಿ ನಮ್ಮ ದೇಶದ ವಿಜ್ಞಾನಿಗಳ ಪರಿಶ್ರಮ ಮುಂದುವರಿಯಲಿದೆ ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಚಂದ್ರಯಾನ ಯಶಸ್ಸಿನ ಬಳಿಕ ಒಂದೇ ವಾರದಲ್ಲಿ ಆದಿತ್ಯ ಮಿಷನ್ ಯಾನ ಯಶಸ್ವಿಯಾಗಿದೆ. ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಕುರಿತ ತಿಳುವಳಿಕೆಯನ್ನು ಹೆಚ್ಚಿಸುವ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರೆಯುತ್ತವೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಇನ್ನು ಆದಿತ್ಯ L-1 ನೌಕೆ ಯಶಸ್ವಿಯಾಗಿ ಉಡಾವಣೆಯಾದ ಹಿನ್ನೆಲೆಯಲ್ಲಿ ವಿಜ್ಞಾನಿಗಳು ಸಂಭ್ರಮಾಚರಿಸಿದರು. ಮತ್ತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರಿಗೆ ಮತ್ತು ಅವರ ನೇತೃತ್ವದ ವಿಜ್ಞಾನಿಗಳ ತಂಡಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
After the success of Chandrayaan-3, India continues its space journey.
Congratulations to our scientists and engineers at @isro for the successful launch of India’s first Solar Mission, Aditya -L1.
Our tireless scientific efforts will continue in order to develop better…
— Narendra Modi (@narendramodi) September 2, 2023