ನವದೆಹಲಿ: ಹಮಾಸ್ ಇಸ್ರೇಲ್ ಸಂಘರ್ಷದ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.
ಯುದ್ಧ ಪೀಡಿತ ಗಾಜಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದ ಕೆಲವೇ ದಿನಗಳ ಬಳಿಕ ಈ ಮಾತುಕತೆ ನಡೆದಿದೆ. ನೆತನ್ಯಾಹು ಅವರೊಂದಿಗಿನ ದೂರವಾಣಿ ಸಂಭಾಷಣೆಯ ಸಮಯದಲ್ಲಿ, ಇಸ್ರೇಲ್-ಹಮಾಸ್ ಯುದ್ಧ ಮತ್ತು ಸಮುದ್ರ ಸಂಚಾರದ ಸುರಕ್ಷತೆ ಸೇರಿದಂತೆ ಹಲವಾರು ವಿಷಯಗಳನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ.
ಇಸ್ರೇಲ್ ಪಡೆಗಳು ಮತ್ತು ಹಮಾಸ್ ಉಗ್ರಗಾಮಿಗಳ ನಡುವೆ ನಡೆಯುತ್ತಿರುವ ಯುದ್ಧದ ಇತ್ತೀಚಿನ ಬೆಳವಣಿಗೆಗಳ ಕುರಿತು ನೆತನ್ಯಾಹು ಅವರು ದೂರವಾಣಿ ಕರೆಯಲ್ಲಿ ಪ್ರಧಾನಿ ಮೋದಿಯವರಿಗೆ ವಿವರಿಸಿದರು. ಏತನ್ಮಧ್ಯೆ, ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಯ ಪರವಾಗಿ ಭಾರತದ ನಿಲುವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.
ಸಂತ್ರಸ್ತರಿಗೆ ಮಾನವೀಯ ನೆರವು ದೊರೆಯಲೇಬೇಕು ಎಂದು ಭಾರತದ ಪ್ರಧಾನಿ ಪುನರುಚ್ಚರಿಸಿದರು. ಕೆಂಪು ಸಮುದ್ರದಲ್ಲಿ ಜಾಗತಿಕ ಹಡಗು ಸಾಗಣೆಗೆ ಇರಾನ್ ಬೆಂಬಲಿತ ಹೌತಿಗಳು ಒಡ್ಡುತ್ತಿರುವ ಬೆದರಿಕೆಗಳ ಬಗ್ಗೆ ನೆತನ್ಯಾಹು ಅವರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿದ್ದಾರೆ.
Had a productive exchange of views with PM @netanyahu on the ongoing Israel-Hamas conflict, including shared concerns on the safety of maritime traffic. Highlighted India’s consistent stand in favour of early restoration of peace & stability in the region with continued…
— Narendra Modi (@narendramodi) December 19, 2023