ನವದೆಹಲಿ: ಇಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ವೇಳೆ, ಪಟೇಲ್ ಅವರ ದೂರದೃಷ್ಟಿಯ ರಾಜತಾಂತ್ರಿಕತೆ ಮತ್ತು “ನಮ್ಮ ರಾಷ್ಟ್ರದ ಭವಿಷ್ಯವನ್ನು ಅವರು ರೂಪಿಸಿದ” ಅಸಾಧಾರಣ ಸಮರ್ಪಣೆಯನ್ನು ಮೋದಿ ಸ್ಮರಿಸಿದರು.
“ಸರ್ದಾರ್ ಪಟೇಲ್ ಅವರ ಜಯಂತಿಯಂದು, ಅವರ ಅದಮ್ಯ ಮನೋಭಾವ, ದೂರದೃಷ್ಟಿಯ ರಾಜನೀತಿ ಮತ್ತು ಅವರು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸಿದ ಅಸಾಧಾರಣ ಸಮರ್ಪಣೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ರಾಷ್ಟ್ರೀಯ ಏಕೀಕರಣಕ್ಕೆ ಅವರ ಬದ್ಧತೆ ನಮಗೆ ಮಾರ್ಗದರ್ಶನ ನೀಡುತ್ತಲೇ ಇದೆ. ಅವರ ಸೇವೆಗೆ ನಾವು ಸದಾ ಋಣಿಯಾಗಿದ್ದೇವೆ” ಎಂದು ಅವರು ಎಕ್ಸ್ನಲ್ಲಿ ತಿಳಿಸಿದ್ದಾರೆ.
ಇನ್ನು 2018ರ ಅ.31 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನರ್ಮದಾ ನದಿಯ ದಡದಲ್ಲಿ ಸರ್ದಾರ ಪಟೇಲ್ ಅವರ ಏಕತಾ ಪ್ರತಿಮೆಯನ್ನು ಉದ್ಘಾಟಿಸಿದರು. 182 ಮೀಟರ್ ಎತ್ತರವಿರುವ, ಸುಮಾರು 2,989 ಕೋಟಿ ರೂ. ವೆಚ್ಚದಲ್ಲಿ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದು ವಿಶ್ವದ ಅತಿ ಎತ್ತರದ ಪ್ರತಿಮೆಯಾಗಿದೆ.
On the Jayanti of Sardar Patel, we remember his indomitable spirit, visionary statesmanship and the extraordinary dedication with which he shaped the destiny of our nation. His commitment to national integration continues to guide us. We are forever indebted to his service.
— Narendra Modi (@narendramodi) October 31, 2023