News Karnataka Kannada
Friday, May 10 2024
ದೆಹಲಿ

ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ

Modiii Pdsda
Photo Credit : News Kannada

ನವದೆಹಲಿ: ಇಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ವೇಳೆ, ಪಟೇಲ್ ಅವರ ದೂರದೃಷ್ಟಿಯ ರಾಜತಾಂತ್ರಿಕತೆ ಮತ್ತು “ನಮ್ಮ ರಾಷ್ಟ್ರದ ಭವಿಷ್ಯವನ್ನು ಅವರು ರೂಪಿಸಿದ” ಅಸಾಧಾರಣ ಸಮರ್ಪಣೆಯನ್ನು ಮೋದಿ ಸ್ಮರಿಸಿದರು.

“ಸರ್ದಾರ್ ಪಟೇಲ್ ಅವರ ಜಯಂತಿಯಂದು, ಅವರ ಅದಮ್ಯ ಮನೋಭಾವ, ದೂರದೃಷ್ಟಿಯ ರಾಜನೀತಿ ಮತ್ತು ಅವರು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸಿದ ಅಸಾಧಾರಣ ಸಮರ್ಪಣೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ರಾಷ್ಟ್ರೀಯ ಏಕೀಕರಣಕ್ಕೆ ಅವರ ಬದ್ಧತೆ ನಮಗೆ ಮಾರ್ಗದರ್ಶನ ನೀಡುತ್ತಲೇ ಇದೆ. ಅವರ ಸೇವೆಗೆ ನಾವು ಸದಾ ಋಣಿಯಾಗಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಇನ್ನು 2018ರ ಅ.31 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನರ್ಮದಾ ನದಿಯ ದಡದಲ್ಲಿ ಸರ್ದಾರ ಪಟೇಲ್‌ ಅವರ ಏಕತಾ ಪ್ರತಿಮೆಯನ್ನು ಉದ್ಘಾಟಿಸಿದರು. 182 ಮೀಟರ್ ಎತ್ತರವಿರುವ, ಸುಮಾರು 2,989 ಕೋಟಿ ರೂ. ವೆಚ್ಚದಲ್ಲಿ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದು ವಿಶ್ವದ ಅತಿ ಎತ್ತರದ ಪ್ರತಿಮೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು