ನವದೆಹಲಿ: ದುಬೈ ನಲ್ಲಿ ನಡೆದ ಸಿಒಪಿ28 ಶೃಂಗಸಭೆ ಪೂರ್ಣಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಡರಾತ್ರಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.
ಹವಾಮಾನ ಬದಲಾವಣೆ ಕುರಿತು ಜಾಗತಿಕ ನಾಯಕರೊಂದಿಗೆ ಪ್ರಧಾನಿ ಅವರ ಸಭೆ ಮಹತ್ವ ಪೂರ್ಣವಾಗಿತ್ತು. ಈ ಶೃಂಗಸಭೆ ದಕ್ಷಿಣದ ದೇಶಗಳ ಮೇಲೆ ಪ್ರಭಾವ ಬೀರಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಅದೇ ರೀತಿ ಗ್ಲೋಬಲ್ ಸೌತ್ನ ಆಕಾಂಕ್ಷೆಗಳನ್ನು ಈಡೇರಿಸಲು ಹವಾಮಾನ ಹಣಕಾಸು ಮತ್ತು ತಂತ್ರಜ್ಞಾನ ಅತ್ಯಗತ್ಯ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರರು ಟ್ವೀಟ್ ಮಾಡಿದ್ದಾರೆ.