ದೆಹಲಿ: ಇಂದು (ಆ.27) ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ನಡೆಯುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.
ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 104ನೇ ಸಂಚಿಕೆಯಾಗಿದೆ. ಕಾರ್ಯಕ್ರಮವನ್ನು ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ನೆಟ್ವರ್ಕ್, ಆಕಾಶವಾಣಿ ವೆಬ್ಸೈಟ್ ಮತ್ತು ನ್ಯೂಸ್ ಆನ್ ಏರ್ ಮೊಬೈಲ್ ಅಪ್ಲಿಕೇಶನ್ನಲ್ಲಿ ಪ್ರಸಾರ ಮಾಡಲಾಗುತ್ತದೆ.
ಈ ಬಾರಿ ಮೋದಿ ಅವರು ಜಾರ್ಖಂಡ್ನ ಗುಮ್ಲಾ ಜಿಲ್ಲೆಯಿಂದ 20 ಕಿ.ಮೀ ದೂರದಲ್ಲಿರುವ ಕೊಟೆಂಗ್ಸೆರಾ ಗ್ರಾಮದ ರೈತರ ಬಗ್ಗೆ ಮನ್ ಕೀ ಬಾತ್ನಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ಪ್ರಭಾತ್ ಖಬರ್ ಡಾಟ್ ಕಾಂ ವರದಿ ಮಾಡಿದೆ.