ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್ಗಢದಲ್ಲಿ ವಿಧಾನಸಭೆ ಚುನಾವಣೆ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಆರಂಭಿಸಿದೆ. ಈ ಎಲ್ಲ ರಾಜ್ಯಗಳಲ್ಲಿ ಪ್ರಧಾನಿ ಮೋದಿ ಅವರೇ ರ್ಯಾಲಿ ನಡೆಸಲಿದ್ದಾರೆ.
ಶನಿವಾರ (ಇಂದು) ಮೆಗಾ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಶನಿವಾರ, ಮೋದಿ ಬಿಜೆಪಿಯ ಎರಡು ‘ಪರಿವರ್ತನ್ ಯಾತ್ರೆ’ಗಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಛತ್ತೀಸ್ಗಢದ ಬಿಲಾಸ್ಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಕಾಲೇಜು ಮೈದಾನದಲ್ಲಿ ‘ಪರಿವರ್ತನ್ ಮಹಾಸಂಕಲ್ಪ’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮತ್ತೆ ಅಕ್ಟೋಬರ್ 3 ರಂದು ಬಸ್ತಾರ್ನ ಜಗದಲ್ಪುರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮತ್ತೆ ಪಾಲ್ಗೊಳ್ಳಲಿದ್ದಾರೆ. ಅಕ್ಟೋಬರ್ 1 ರಂದು ತೆಲಂಗಾಣದ ಮಹಬೂಬ್ನಗರ ಜಿಲ್ಲೆಗೆ ಭೇಟಿ ನೀಡಲಿರುವ ಮೋದಿ ಅಲ್ಲಿ ₹13,500 ಕೋಟಿಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.