ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24 ರಂದು ವಾರಣಾಸಿಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಒನ್ ವರ್ಲ್ಡ್ ಟಿಬಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 1,780 ಕೋಟಿ ರೂ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಾರ್ಚ್ 24ರಂದು ವಿಶ್ವ ಕ್ಷಯರೋಗ ದಿನದಂದು ಅವರು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಸ್ಟಾಪ್ ಟಿಬಿ ಪಾರ್ಟ್ನರ್ಶಿಪ್ ಆಯೋಜಿಸಿರುವ ಟಿಬಿ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ, ಅವರು ಟಿಬಿ-ಮುಕ್ತ ಪಂಚಾಯತ್ ಉಪಕ್ರಮ, ಅಲ್ಪಾವಧಿಯ ಟಿಬಿ ತಡೆಗಟ್ಟುವ ಚಿಕಿತ್ಸೆಯ (ಟಿಪಿಟಿ) ಅಧಿಕೃತ ಪ್ಯಾನ್-ಇಂಡಿಯಾ ರೋಲ್ಔಟ್, ಕ್ಷಯರೋಗಕ್ಕೆ ಕುಟುಂಬ ಕೇಂದ್ರಿತ ಆರೈಕೆ ಮಾದರಿ ಮತ್ತು ಭಾರತದ ವಾರ್ಷಿಕ ಟಿಬಿ ವರದಿ 2023.ಎ ಬಿಡುಗಡೆ ಸೇರಿದಂತೆ ವಿವಿಧ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಟಿಬಿಯನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಸಾಧಿಸಿದ ಪ್ರಗತಿಗಾಗಿ ಆಯ್ದ ರಾಜ್ಯಗಳು ಮತ್ತು ಜಿಲ್ಲೆಗಳಿಗೆ ಮೋದಿ ಪ್ರಶಸ್ತಿ ನೀಡಲಿದ್ದಾರೆ.