News Karnataka Kannada
Sunday, May 05 2024
ದೆಹಲಿ

PMGKA ಯೋಜನೆ ಮತ್ತೆ 6 ತಿಂಗಳು ವಿಸ್ತರಣೆ; ಪ್ರಧಾನಿ ಮೋದಿ ಮಹತ್ವದ ಘೋಷಣೆ

Food
Photo Credit :

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY)ಯನ್ನು ಇನ್ನೂ ಆರು ತಿಂಗಳವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.

ಈ ಕುರಿತು ಟ್ವಿಟ್‌ ಮೂಲಕ ಮಾಹಿತಿ ನೀಡಿರುವ ಪ್ರಧಾನಿ ಮೋದಿ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಈ ವರ್ಷದ ಸೆಪ್ಟೆಂಬರ್‌ ವರೆಗೆ ಅಂದರೆ ಇನ್ನೂ 6 ತಿಂಗಳವರೆಗೆ ವಿಸ್ತರಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ದೇಶದ 80 ಕೋಟಿಗೂ ಹೆಚ್ಚು ಜನರು ಈ ಯೋಜನೆಯ ಲಾಭವನ್ನು ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.

ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಡಜನರಿಗೆ ನೆರವಾಗಲು ಮಾರ್ಚ್ 2020ರಲ್ಲಿ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿತ್ತು. ಪಡಿತರ ಕಾರ್ಡುದಾರರಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಆಹಾರ ಧಾನ್ಯಗಳನ್ನು ಈ ಯೋಜನೆಯ ಮೂಲಕ ಒದಗಿಸಲಾಗುತ್ತದೆ.

ಈ ಯೋಜನೆಯಡಿ ಕೇಂದ್ರವು ತಿಂಗಳಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ. ಕೇಂದ್ರವು 2.6 ಟ್ರಿಲಿಯನ್ ರೂ.ಗಳನ್ನು ಈ ಯೋಜನೆಗಾಗಿ ಇಲ್ಲಿಯವರೆಗೆ ಖರ್ಚು ಮಾಡಿದೆ. ಮುಂದಿನ 6 ತಿಂಗಳುಗಳಲ್ಲಿ 80,000 ಕೋಟಿ ರೂಪಾಯಿಗಳನ್ನು ಯೋಜನೆಗೆ ಖರ್ಚು ಮಾಡಲಾಗುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು