ನವದೆಹಲಿ: 2020ರ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬಡವರಿಗಾಗಿ 5 ಕಿಲೋ ಆಹಾರಧಾನ್ಯಗಳನ್ನು ಉಚಿತವಾಗಿ ವಿತರಿಸುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಆರಂಭಿಸಿತು.
ಇದೀಗ ಯೋಜನೆಯನ್ನು 5 ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಅನುರಾಗ್ ಠಾಕೂರ್ ಬುಧವಾರ ಈ ವಿಷಯ ತಿಳಿಸಿದ್ದಾರೆ.
ಗರೀಬ್ ಕಲ್ಯಾಣ್ ಯೋಜನೆ 2028ರವರೆಗೂ ಲಭ್ಯ ಇರುತ್ತದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಒಂದು ಕುಟುಂಬಕ್ಕೆ ಪ್ರತೀ ತಿಂಗಳು 5 ಕಿಲೋನಷ್ಟು ಆಹಾರಧಾನ್ಯಗಳನ್ನು ಉಚಿತವಾಗಿ ಕೊಡಲಾಗುತ್ತದೆ. ಈ ಯೋಜನೆಯಲ್ಲಿ 80 ಕೋಟಿ ಫಲಾನುಭವಿಗಳಿದ್ದಾರೆ ಎಂದು ತಿಳಿಸಿದ್ದಾರೆ.