News Karnataka Kannada
Tuesday, May 07 2024
ದೆಹಲಿ

ಕೇಸರಿ ಪಕ್ಷ 300 ಸ್ಥಾನಗಳನ್ನು ಗೆಲ್ಲಬಹುದು : ಪ್ರಶಾಂತ್ ಕಿಶೋರ್

ಲೋಕಸಬಾ ಚುನಾವಣೆ ಹಿನ್ನಲೆ ಹಲವರ ಅಬಿಪ್ರಾಯಗಳಲ್ಲೂ ಬದಲಾವಣೆಗಳು ಕಾಣುತ್ತಿವೆ ಅದರಂತೆ ಬಿಜೆಪಿಯ ಗೆಲುವನ್ನು ಒಪ್ಪಿಕೊಂಡ ಖ್ಯಾತ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್,
Photo Credit : NewsKarnataka

ನವದೆಹಲಿ:  ಲೋಕಸಬಾ ಚುನಾವಣೆ ಹಿನ್ನಲೆ ಹಲವರ ಅಬಿಪ್ರಾಯಗಳಲ್ಲೂ ಬದಲಾವಣೆಗಳು ಕಾಣುತ್ತಿವೆ ಅದರಂತೆ ಬಿಜೆಪಿಯ ಗೆಲುವನ್ನು ಒಪ್ಪಿಕೊಂಡ ಖ್ಯಾತ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಕೇಸರಿ ಪಕ್ಷವು ಕರ್ನಾಟಕ ಹೊರತುಪಡಿಸಿ ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ದುರ್ಬಲವಾಗಿರುವ ರಾಜ್ಯಗಳಲ್ಲಿ ಮತ್ತು ಅಸ್ತಿತ್ವವೇ ಇಲ್ಲದ ಎರಡು ಕಡೆ ತನ್ನ ಸ್ಥಾನಗಳನ್ನು ಮತ್ತು ಮತಗಳ ಪಾಲನ್ನು ಗಮನಾರ್ಹವಾಗಿ ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಪಿಟಿಐ ಸಂಪಾದಕರೊಂದಿಗಿನ ಸಂವಾದದಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರಬಲವಾಗಿರುವ ಕಡೆ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ಪಕ್ಷವಾಗಲಿ ಅಥವಾ ಪ್ರಧಾನಿ ನರೇಂದ್ರ ಮೋದಿಗಾಗಲಿ ಗೆಲುವು ಸುಲಭವಾಗಿರಲಿಲ್ಲ. ಆದರೆ ಪ್ರತಿಪಕ್ಷಗಳು ಬಿಜೆಪಿಯನ್ನು ಕಟ್ಟಿಹಾಕುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದರು.

“ಅವರು (ಬಿಜೆಪಿ) ತೆಲಂಗಾಣದಲ್ಲಿ ಮೊದಲ ಅಥವಾ ಎರಡನೆಯ ಪಕ್ಷವಾಗುತ್ತಾರೆ. ಅವರಿಗೆ ಅದು ದೊಡ್ಡ ವಿಷಯವಾಗಲಿದೆ. ಒಡಿಶಾದಲ್ಲಿ ಅವರು ಖಂಡಿತವಾಗಿಯೂ ನಂಬರ್ ಒನ್ ಆಗುತ್ತಾರೆ. ನೀವು ಆಶ್ಚರ್ಯಪಡುತ್ತೀರಿ, ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ನಂಬರ್ ಒನ್ ಪಕ್ಷವಾಗಲಿದೆ” ಎಂದು ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ.

ವಿಷೇಶ ಏನೆಂದರೆ ಬಿಜೆಪಿ 370 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇಲ್ಲ ಎಂದು ಪ್ರತಿಪಾದಿಸಿದ ಕಿಶೋರ್, ಕೇಸರಿ ಪಕ್ಷ 300 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಜೊತೆಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಮರಳಿ ಅಧಿಕಾರಕ್ಕೆ ಬರುವುದು “ಬಹಳ ಕಷ್ಟ” ಎಂದು ಕಿಶೋರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು