ನವದೆಹಲಿ: ಕೇಂದ್ರೀಯ ತನಿಖಾ ದಳದ (ಸಿಬಿಐ) ಜಂಟಿ ನಿರ್ದೇಶಕರಾಗಿ ಪ್ರವೀಣ್ ಮಧುಕರ್ ಪವಾರ್ (ಐಪಿಎಸ್) ಶುಕ್ರವಾರ ನೇಮಕಗೊಂಡಿದ್ದಾರೆ. ಐದು ವರ್ಷಗಳ ಅವಧಿಗೆ ಅವರನ್ನು ಹುದ್ದೆಗೆ ನೇಮಕ ಮಾಡಲಾಗಿದೆ.
ಈ ಹಿಂದೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಗಿದ್ದ ಪ್ರವೀಣ್ ಸೂದ್ ಅವರನ್ನು ಕೇಂದ್ರ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸರ್ಕಾರ ನೇಮಿಸಿತ್ತು. ಕರ್ನಾಟಕ ಕೇಡರ್ ನ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ಅವರು 2003ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.