ದೆಹಲಿ: ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಸಂಬಂಧಿತ ಘೋಷಣೆಗಳನ್ನು ಬರೆಯಲಾಗಿದ್ದು, ತನಿಖೆ ಶುರುವಾಗಿದೆ. ದೆಹಲಿಯು ಖಲಿಸ್ತಾನವಾಗಲಿದೆ, ಖಲಿಸ್ತಾನ್ ಜಿಂದಾಬಾದ್ ಎಂದು ಘೋಷಣೆಯನ್ನು ಬರೆಯಲಾಗಿದೆ. ಜಿ20 ಶೃಂಗಸಭೆಗೂ ಮುನ್ನ ಈ ಘಟನೆ ದೆಹಲಿಯಲ್ಲಿ ಸಂಚಲನ ಮೂಡಿಸಿದೆ.
ಇದರ ವಿರುದ್ಧ ದೆಹಲಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ, ಇದಲ್ಲದೇ ಗುಪ್ತಚರ ಸಂಸ್ಥೆಗಳೂ ತನಿಖೆ ಆರಂಭಿಸಿವೆ. ದೆಹಲಿಯ ಶಿವಾಜಿ ಪಾರ್ಕ್ನಿಂದ ಪಂಜಾಬಿ ಬಾಗ್ವರೆಗೆ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆಯಲಾಗಿದೆ.
ಜಿ20 ಶೃಂಗಸಭೆಯು ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ. ಈ ಸಮ್ಮೇಳನವನ್ನು ಯಶಸ್ವಿಗೊಳಿಸಲು ಭರದ ಸಿದ್ಧತೆಗಳೂ ನಡೆಯುತ್ತಿವೆ. ಈ ಸಂದರ್ಭದಲ್ಲಿ ಇಂತಹ ಬರಹಗಳು ಆತಂಕ ಸೃಷ್ಠಿಸಿದೆ