Categories: ದೆಹಲಿ

ನೋಟುಗಳನ್ನು ವಾಪಸ್‌ ಪಡೆಯುವ ಪ್ರಕ್ರಿಯೆ: ಜನರಿಗೆ ಆರ್‌ಬಿಐ ಗವರ್ನರ್‌ ಹೇಳಿದ್ದೇನು ಗೊತ್ತಾ

ನವದೆಹಲಿ: ಎರಡು ಸಾವಿರ ರೂ. ಮುಖಬೆಲೆಯ ನೋಟುಗಳನ್ನು ವಾಪಸ್‌ ಪಡೆಯುವ ಪ್ರಕ್ರಿಯೆಯಿಂದ ನಾಗರಿಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತದಾಸ್‌ ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಮಾತನಾಡಿದ ಅವರು, ವಿನಿಮಯ ಮತ್ತು ಠೇವಣಿ ಇರಿಸಲು ಇನ್ನೂ 4 ತಿಂಗಳು ಕಾಲಾವಕಾಶವಿದೆ ಎಂದು ಪ್ರತಿಪಾದಿಸಿದ್ದಾರೆ.

ಆರ್‌ಬಿಐ ನಿರ್ಧಾರದಿಂದ ಅರ್ಥ ವ್ಯವಸ್ಥೆಯ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಉಂಟಾಗಲಾರದು. ಏಕೆಂದರೆ, ಒಟ್ಟಾರೆ ಚಲಾವಣೆಯಲ್ಲಿರುವ ಕರೆನ್ಸಿ ನೋಟುಗಳ ಪೈಕಿ ಈ ನೋಟುಗಳ ಪ್ರಮಾಣ ಶೇ.10.8ರಷ್ಟು ಮಾತ್ರ ಎಂದೂ ಅವರು ತಿಳಿಸಿದ್ದಾರೆ.

ಮಂಗಳವಾರದಿಂದ ಶುರುವಾಗುವ ವಿನಿಮಯ ಮತ್ತು ಠೇವಣಿ ಪ್ರಕ್ರಿಯೆ ಸೆ.30ರವರೆಗೆ ಇರಲಿದೆ. ಈ ಅವಧಿಯಲ್ಲಿ 2 ಸಾವಿರ ರೂ. ಮುಖಬೆಲೆಯ ನೋಟುಗಳು ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಿಂದ ಬ್ಯಾಂಕ್‌ಗಳಿಗೆ ಬಂದು ಸೇರಲಿದೆ ಎಂಬ ವಿಶ್ವಾಸವನ್ನೂ ದಾಸ್‌ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್‌ ಪಂಪ್‌ಗ್ಳಿಗೆ ಹರಿದುಬಂದ ನೋಟುಗಳು!

ಮಧ್ಯಪ್ರದೇಶದ ಇಂದೋರ್‌ನ ಪೆಟ್ರೋಲ್‌ಪಂಪ್‌ಗ್ಳಿಗೆ ಈಗ 2 ಸಾವಿರ ರೂ. ಮುಖಬೆಲೆಯ ನೋಟುಗಳೇ ಹರಿದುಬರಲಾರಂಭಿಸಿವೆ. ನೋಟು ವಾಪಸ್‌ ಘೋಷಣೆ ಬಳಿಕ 100ರೂ. ಪೆಟ್ರೋಲ್‌ ಹಾಕಲು ಬಂದವರು ಕೂಡ 2,000ರೂ. ನೋಟನ್ನೇ ನೀಡುತ್ತಿದ್ದಾರೆ. ಪಿಂಕ್‌ ನೋಟುಗಳ ಮೂಲಕ ಪೆಟ್ರೋಲ್‌ ಖರೀದಿಸುತ್ತಿರುವವರ ಪ್ರಮಾಣ ಹಿಂದಿಗಿಂತ 5 ಪಟ್ಟು ಅಧಿಕವಾಗಿದೆ ಎಂದು ಇಂದೋರ್‌ ಪೆಟ್ರೋಲ್‌ ಪಂಪ್‌ ಡೀಲರ್‌ಗಳ ಸಂಘ ತಿಳಿಸಿದೆ.

Gayathri SG

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

49 mins ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

58 mins ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

1 hour ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

2 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

2 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

2 hours ago