News Karnataka Kannada
Friday, May 03 2024
ದೆಹಲಿ

ಕತಾರ್‌ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆ 8 ಮಾಜಿ ಸಿಬ್ಬಂದಿಗೆ ಶಿಕ್ಷೆ ಕಡಿತ

ಜಿಲ್ಲೆಯ ರಬಕವಿ ಬಸ್ ನಿಲ್ದಾಣದಲ್ಲಿ ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು ಚುಡಾಯಿಸಿ, ಹಲ್ಲೆ ಮಾಡಿದ ಘಟನೆ ಬುಧವಾರ ನಡೆದದಿದ್ದು ತಡವಾಗಿ ಬೆಳಕಿಗೆ ಬಂದಿದೆ.
Photo Credit : News Kannada

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಗೂಢಚರ್ಯೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಎಂಟು ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ನೀಡಲಾಗಿದ್ದ ಶಿಕ್ಷೆಯನ್ನು ಕತಾರ್ ನ್ಯಾಯಾಲಯ ಗುರುವಾರ ಕಡಿತಗೊಳಿಸಿದೆ. ನೌಕಾಪಡೆಯ ಯೋಧರಿಗೆ ಮರಣದಂಡನೆ ವಿಧಿಸಿದ ವಿರುದ್ಧ ಭಾರತ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್‌ ನ್ಯಾಯಾಲಯವು ಸ್ವೀಕರಿಸಿದ ವಾರಗಳ ನಂತರ ಈ ಬೆಳವಣಿಗೆಯಾಗಿದೆ.

ತೀರ್ಪನ್ನು ಇನ್ನೂ ಬಿಡುಗಡೆ ಮಾಡದ ಕಾರಣ ಕಡಿಮೆಯಾದ ನಿಯಮಗಳ ಬಗ್ಗೆ ಹೆಚ್ಚಿನ ವಿವರಗಳು ಸದ್ಯ ಲಭ್ಯವಾಗಿಲ್ಲ. ಮುಂದಿನ ಕ್ರಮಗಳನ್ನು ನಿರ್ಧರಿಸಲು ಕಾನೂನು ತಂಡ ಮತ್ತು ಕುಟುಂಬ ಸದಸ್ಯರೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ಭಾರತ ಸರ್ಕಾರ ಹೇಳಿದೆ. “ನಾವು ಮೊದಲಿನಿಂದಲೂ ಅವರ ಬೆಂಬಲಕ್ಕೆ ನಿಂತಿದ್ದೇವೆ. ನಾವು ಎಲ್ಲಾ ದೂತಾವಾಸ ಮತ್ತು ಕಾನೂನು ನೆರವು ನೀಡುವುದನ್ನು ಮುಂದುವರಿಸುತ್ತೇವೆ. ನಾವು ಕತಾರಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದನ್ನು ಮುಂದುವರಿಸುತ್ತೇವೆ ಎಂದು ಭಾರತ ಸರ್ಕಾರ ಹೇಳಿದೆ.

ಬಂಧಿತ ಭಾರತೀಯರನ್ನು ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಲಾ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ನಾವಿಕ ರಾಗೇಶ್ ಎಂದು ಗುರುತಿಸಲಾಗಿದೆ .ಎಲ್ಲರೂ ಭಾರತೀಯ ನೌಕಾಪಡೆಯ ಮಾಜಿ ಉದ್ಯೋಗಿಗಳಾಗಿದ್ದಾರೆ. ಭಾರತೀಯ ನೌಕಾಪಡೆಯಲ್ಲಿ (Indian Navy) ಮುಂಚೂಣಿಯ ಯುದ್ಧನೌಕೆಗಳಿಗೆ ಕಮಾಂಡರ್ ಆಗಿದ್ದ ಅಧಿಕಾರಿಗಳು ಸೇರಿದಂತೆ ಎಂಟು ಮಂದಿಗೆ ಕತಾರ್‌ನ ಫಸ್ಟ್ ಇನ್‌ಸ್ಟಾನ್ಸ್ ನ್ಯಾಯಾಲಯವು ಅಕ್ಟೋಬರ್ 26 ರಂದು ಮರಣದಂಡನೆ ವಿಧಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು