ನವದೆಹಲಿ: 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಲೆಥ್ಪೊರಾದಲ್ಲಿ ಪುಷ್ಪ ನಮನ ಸಲ್ಲಿಸಿದರು.
ಪುಲ್ವಾಮಾದ ಲೆಥ್ಪೋರಾದಲ್ಲಿ ಯಾತ್ರೆಯನ್ನು ಸ್ವಲ್ಪ ಸಮಯ ನಿಲ್ಲಿಸಿದ ಅವರು, ಭಯೋತ್ಪಾದಕ ದಾಳಿಯಲ್ಲಿ 40 ಸಿಆರ್ಪಿಎಫ್ ಜವಾನರು ಸಾವನ್ನಪ್ಪಿದ ಸ್ಥಳದಲ್ಲಿ ಪುಷ್ಪಗುಚ್ಛ ಅರ್ಪಿಸಿದರು.
ಅನಂತ್ನಾಗ್ ಜಿಲ್ಲೆಯ ಚೆರ್ಸೂ ಗ್ರಾಮದಿಂದ ರಾಹುಲ್ ಗಾಂಧಿ ಯಾತ್ರೆಯನ್ನು ಪುನರಾರಂಭಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆ ಜನವರಿ 30 ರಂದು ಶ್ರೀನಗರದಲ್ಲಿ ಕೊನೆಗೊಳ್ಳಲಿದೆ, ಅಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ ಮತ್ತು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.