ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾದರಿಯಲ್ಲೇ ಭಾರತ ನ್ಯಾಯ ಯಾತ್ರೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಜನವರಿ 14 ರಂದು ಯಾತ್ರೆ ಶುರುವಾಗಲಿದೆ. ಮಣಿಪುರದಿಂದ ಮುಂಬೈವರೆಗೆ ಭಾರತ ನ್ಯಾಯ ಯಾತ್ರೆ ನಡೆಯಲಿದೆ.
ವರದಿಗಳ ಪ್ರಕಾರ, ಪಕ್ಷದ ಹೈಕಮಾಂಡ್ ಹೊರತುಪಡಿಸಿ, ಎಲ್ಲಾ ರಾಜ್ಯ ಕಾಂಗ್ರೆಸ್ ನಾಯಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಶಾನ್ಯ ಭಾರತದ ರಾಜ್ಯವಾದ ಮಣಿಪುರದಿಂದ ಜನವರಿ 14 ರಂದು ಪ್ರಾರಂಭವಾಗುವ ಪಾದಯಾತ್ರೆಯು 30 ತಿಂಗಳವರೆಗೆ ಇರುತ್ತದೆ.
ಕಾಂಗ್ರೆಸ್ನ ಈ ಭಾರತ ನ್ಯಾಯ ಯಾತ್ರೆ 14 ರಾಜ್ಯಗಳು ಮತ್ತು 85 ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ. ಇದು ಅಸ್ಸಾಂ, ನಾಗಾಲ್ಯಾಂಡ್, ಮೇಘಾಲಯ, ಬಿಹಾರ, ಜಾರ್ಖಂಡ್, ಬಂಗಾಳ, ಛತ್ತೀಸ್ಗಢ, ಮಧ್ಯಪ್ರದೇಶ, ಯುಪಿ, ರಾಜಸ್ಥಾನ, ಗುಜರಾತ್ ಮತ್ತು ಮೂಲಕ ಮುಂಬೈ ತಲುಪಲಿದೆ. ಬಸ್ ಮೂಲಕ ಯಾತ್ರೆ ನಡೆಸಲಿದ್ದು, ಕೆಲವೆಡೆ ಕಾಲ್ನಡಿಗೆಯಲ್ಲಿಯೂ ಯಾತ್ರೆ ನಡೆಯಲಿದೆ.
ಮಾರ್ಚ್ 20 ರಂದು ಮುಂಬೈನಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ. 6,200 ಕಿ.ಮೀ ರಾಹುಲ್ ಗಾಂಧಿ ಯಾತ್ರೆ ಸಾಗಲಿದೆ. 14 ರಾಜ್ಯಗಳ 85 ಜಿಲ್ಲೆಗಳಲ್ಲಿ ಸಂಚಾರ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಭಾರತ ನ್ಯಾಯ ಯಾತ್ರೆ’ಗೆ ಚಾಲನೆ ನೀಡಲಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಈ ಯಾತ್ರೆಯನ್ನು ಮಣಿಪುರದಿಂದ ಆರಂಭಿಸುವ ಉದ್ದೇಶ ಮಣಿಪುರ ದೇಶದ ಪ್ರಮುಖ ಭಾಗವಾಗಿದೆ. ಇದು ರಾಜಕೀಯ ಯಾತ್ರೆಯಲ್ಲ, ಇದು ಸಂಕಷ್ಟದಲ್ಲಿರುವ ಸಾಮಾನ್ಯ ಜನರಿಗಾಗಿ ಎಂದು ಹೇಳಿದ್ದಾರೆ.
ಭಾರತವನ್ನು ಒಗ್ಗೂಡಿಸಲು ‘ಭಾರತ್ ಜೋಡೋ ಯಾತ್ರೆ’ ಆಗಿದ್ದು, ಈಗ ‘ಭಾರತ್ ನ್ಯಾಯ ಯಾತ್ರೆ’ ನಡೆಯಲಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.